<p><strong>ಮಲೇಬೆನ್ನೂರು: </strong>ಪಟ್ಟಣದ ಗ್ರಾಮದೇವತೆ ಏಕನಾಥೇಶ್ವರಿ (ಹೊರಗಿನಮ್ಮ) ದೇವಾಲಯದಲ್ಲಿ ಆಷಾಢ ಮಾಸದ ಶುಕ್ರವಾರದ ಅಂಗವಾಗಿ ವಿಶೇಷ ಪೂಜೆ, ‘ಪರವು’ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.</p>.<p>ಸಾಂಪ್ರದಾಯಿಕ ಗಂಗಾಪೂಜೆ ನಂತರ ಮೂಲ ದೇವಾಲಯದಲ್ಲಿ ಪೂಜೆ ನೆರವೇರಿಸಿ ಪುಷ್ಪಾಲಂಕಾರ ಮಾಡಿದ್ದರು. ನಂತರ ಮಹಿಳೆಯರು ಕುಂಕುಮಾರ್ಚನೆ ಮಾಡಿ, ಉಡಿ ಸಮರ್ಪಿಸಿದರು. ಜೋಗಮ್ಮಗಳ ಪಡ್ಡಲಗಿಗೆ ಪೂಜೆ, ಧಾನ್ಯ ಸಮರ್ಪಿಸಿದರು.</p>.<p>ಉಧೋ.. ಉಧೋ.. ಉದ್ಘೋಷ ಮುಗಿಲು ಮುಟ್ಟಿತ್ತು. ಜನತೆ ಮಳೆ, ಬೆಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ದೇವಾಲಯವನ್ನು ಅಲಂಕರಿಸಲಾಗಿತ್ತು. ಅಲ್ಲದೇ ಗ್ರಾಮದ ವಿವಿಧ ದೇವಾಲಯಗಳ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಆಯೋಜಕರು ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದರು. </p>.<p>ಸುತ್ತಮುತ್ತಲಿನ ಗ್ರಾಮಗಳ ಬಹಳಷ್ಟು ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. </p>.<p><strong>ಬನ್ನಿ ಕಟ್ಟೆ ಕಾಳಿಕಾ ಮೂರ್ತಿ ಪ್ರತಿಷ್ಠಾಪನೆ</strong>: ದೇವಾಲಯದ ಬಳಿ ಹೊಸದಾಗಿ ನಿರ್ಮಿಸಿದ ಬನ್ನಿಕಟ್ಟೆ, ಬನ್ನಿ ಮಹಾಂಕಾಳಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ವಿಶೇಷ ಹೋಮ– ಹವನ ಗುರುವಾರ ತಡರಾತ್ರಿ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: </strong>ಪಟ್ಟಣದ ಗ್ರಾಮದೇವತೆ ಏಕನಾಥೇಶ್ವರಿ (ಹೊರಗಿನಮ್ಮ) ದೇವಾಲಯದಲ್ಲಿ ಆಷಾಢ ಮಾಸದ ಶುಕ್ರವಾರದ ಅಂಗವಾಗಿ ವಿಶೇಷ ಪೂಜೆ, ‘ಪರವು’ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.</p>.<p>ಸಾಂಪ್ರದಾಯಿಕ ಗಂಗಾಪೂಜೆ ನಂತರ ಮೂಲ ದೇವಾಲಯದಲ್ಲಿ ಪೂಜೆ ನೆರವೇರಿಸಿ ಪುಷ್ಪಾಲಂಕಾರ ಮಾಡಿದ್ದರು. ನಂತರ ಮಹಿಳೆಯರು ಕುಂಕುಮಾರ್ಚನೆ ಮಾಡಿ, ಉಡಿ ಸಮರ್ಪಿಸಿದರು. ಜೋಗಮ್ಮಗಳ ಪಡ್ಡಲಗಿಗೆ ಪೂಜೆ, ಧಾನ್ಯ ಸಮರ್ಪಿಸಿದರು.</p>.<p>ಉಧೋ.. ಉಧೋ.. ಉದ್ಘೋಷ ಮುಗಿಲು ಮುಟ್ಟಿತ್ತು. ಜನತೆ ಮಳೆ, ಬೆಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ದೇವಾಲಯವನ್ನು ಅಲಂಕರಿಸಲಾಗಿತ್ತು. ಅಲ್ಲದೇ ಗ್ರಾಮದ ವಿವಿಧ ದೇವಾಲಯಗಳ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಆಯೋಜಕರು ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದರು. </p>.<p>ಸುತ್ತಮುತ್ತಲಿನ ಗ್ರಾಮಗಳ ಬಹಳಷ್ಟು ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. </p>.<p><strong>ಬನ್ನಿ ಕಟ್ಟೆ ಕಾಳಿಕಾ ಮೂರ್ತಿ ಪ್ರತಿಷ್ಠಾಪನೆ</strong>: ದೇವಾಲಯದ ಬಳಿ ಹೊಸದಾಗಿ ನಿರ್ಮಿಸಿದ ಬನ್ನಿಕಟ್ಟೆ, ಬನ್ನಿ ಮಹಾಂಕಾಳಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ವಿಶೇಷ ಹೋಮ– ಹವನ ಗುರುವಾರ ತಡರಾತ್ರಿ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>