ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂದೆಯ ಕೊಂದ ಮಗ

Last Updated 7 ಜುಲೈ 2022, 4:33 IST
ಅಕ್ಷರ ಗಾತ್ರ

ದಾವಣಗೆರೆ: ಚನ್ನಗಿರಿ ತಾಲ್ಲೂಕು ಕತ್ತಲಗೆರೆ ಬಳಿಯ ಎಸ್‌.ಆರ್‌. ಕ್ಯಾಂಪ್‌ನಲ್ಲಿ ಬುಧವಾರ ರಾತ್ರಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ.

ಎಸ್‌.ಆರ್‌. ಕ್ಯಾಂಪ್‌ನ ಮಂಜುನಾಥ (60) ಕೊಲೆಯಾದವರು. ಅವರ ಮಗ ತಿಪ್ಪೇಶ್‌ (23) ಕೊಲೆ ಮಾಡಿದವನು. ಮನೆಯ ವಿಚಾರದಲ್ಲಿ ಬುಧವಾರ ತಂದೆ ಮಗನ ನಡುವೆ ವಾಗ್ವಾದ ಉಂಟಾಗಿದ್ದು, ಅದು ವಿಕೋಪಕ್ಕೆ ಹೋಗಿ ಮಗನೇ ಹೊಡೆದಿದ್ದಾನೆ. ಮಂಜುನಾಥ ಅವರು ಮೃತಪಟ್ಟಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಿ. ಬಸರಗಿ, ಚನ್ನಗಿರಿ ಡಿವೈಎಸ್ಪಿ ಸಂತೋಷ್, ಸಂತೇಬೆನ್ನೂರು ಸಿಪಿಐ ಮಹೇಶ್, ಬಸವಾಪಟ್ಟಣದ ಠಾಣೆಯ ಪೊಲೀಸರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT