<p>ದಾವಣಗೆರೆ: ‘ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ರದ್ಧತಿಗಾಗಿ ರಾಜ್ಯವ್ಯಾಪಿ ಹೋರಾಟ ರೂಪಿಸಲಾಗುವುದು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದರು.</p>.<p>‘ಯು.ಎ.ಪಿ.ಎ ನೆಪವೊಡ್ಡಿ ಆಡಳಿತ ಪಕ್ಷದವರು ಮಾನವಹಕ್ಕು ಹೋರಾಟಗಾರರು, ಚಿಂತಕರು, ಪತ್ರಕರ್ತರು, ಮಹಿಳಾ ಹೋರಾಟಗಾರರನ್ನು ಬಂಧಿಸುವ ಕೆಲಸ ನಡೆಯುತ್ತಿದೆ. ದೇಶದ್ರೋಹ ಕಾನೂನು ವಿಧಿ 124 ಇದೇ ರೀತಿ ದುರ್ಬಳಕೆಯಾಗುತ್ತಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. </p>.<p>‘ಭಯೋತ್ಪಾದನೆ ನಿಗ್ರಹದ ಹೆಸರಿನಲ್ಲಿ ಈವರೆಗೆ 5,229 ಪ್ರಕರಣಗಳು ದಾಖಲಿಸಲಾಗಿದ್ದು, ಹಲವರನ್ನು ಬಂಧಿಸಲಾಗಿದೆ. ಯುಎಪಿಎ ರಾಜಕೀಯ ದುರ್ಬಳಕೆಯಾಗುತ್ತಿರುವುದರ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಬ್ರಿಟಿಷರ ಕಾಲದ ಈ ಕಾನೂನು ಈಗ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ. ಇದನ್ನು ಜನವಿರೋಧಿ ಎಂದು ಪರಿಗಣಿಸಿ ರದ್ದು ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಈ ಕಾಯ್ದೆಯ ಬಗ್ಗೆ ಜನಾಂದೋಲನ ರೂಪಿಸಿಸಲು ಪ್ರತಿ ಜಿಲ್ಲೆಯಲ್ಲೂ ಪ್ರಗತಿಪರರು, ಸಮಾನ ಮನಸ್ಕರು ಹಾಗೂ ಜನಮುಖಿ ಚಿಂತಕರನ್ನು ಒಟ್ಟುಗೂಡಿಸಲಾಗುವುದು. ಬೀದರ್ ಚಾಮರಾಜನಗರ ಜಿಲ್ಲೆಯವರೆಗೆ ಮೆರವಣಿಗೆ, ಜಾಥಾಗಳ ಮೂಲಕ ಈ ಕಾಯ್ದೆಯ ರದ್ಧತಿಗೆ ಜನಾಂದೋಲನ ರೂಪಿಸಲಾಗುವುದು’ ಎಂದು ಹೇಳಿದರು.</p>.<p>ಮುಖಂಡ ಆವರಗೆರೆ ಚಂದ್ರು ಮಾತನಾಡಿ, ‘ಸರ್ಕಾರ ಜನರನ್ನು ಮತದಾರರನ್ನಾಗಿ ನೋಡುತ್ತಿದೆಯೇ ಹೊರತು ಮನುಷ್ಯರನ್ನಾಗಿ ಅಲ್ಲ. ಆಡಳಿತ ಹಾಗೂ ವಿರೋಧ ಪಕ್ಷಗಳೆರಡೂ ಒಂದೇ ನಾಣ್ಯದ ಮುಖಗಳು ಇದ್ದಂತೆ, ಮತಗಳಿಗಾಗಿ ಓಲೈಸುವ ಕೆಲಸ ಮಾಡುತ್ತಿವೆ’ ಎಂದು ಆರೋಪಿಸಿದರು.</p>.<p>ಜಿಲ್ಲಾ ಖಜಾಂಚಿ ಆನಂದರಾಜ್ ಮಾತನಾಡಿ, ‘ರಾಜಕಾರಣಿಗಳಿಗೆ ಜಿಲ್ಲೆಗೆ ಕೈಗಾರಿಕೆಗಳನ್ನು ತರಬೇಕು ಎಂಬ ಚಿಂತನೆ ಇಲ್ಲ. ಎಚ್.ಕೆ. ರಾಮಚಂದ್ರಪ್ಪ ಅವರು ಕೈಗಾರಿಕೆಗಳನ್ನು ತರಬೇಕು ಎಂಬ ಹಿತಾಸಕ್ತಿಯಿಂದ ಕೈಗಾರಿಕೆಗಳನ್ನು ತರಲು ಹೋರಾಟ ಮಾಡಿದ್ದರು’ ಎಂದು ಸ್ಮರಿಸಿದರು.</p>.<p>ಸಿಪಿಐ ಜಿಲ್ಲಾ ಕಾರ್ಯದರ್ಶಿಯಾಗಿ ಆವರಗೆರೆ ಚಂದ್ರು ಅವರನ್ನು ಘೋಷಿಸಿದ್ದು, ಶನಿವಾರ ನಡೆದ ಜಿಲ್ಲಾ ಮಂಡಳಿ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.</p>.<p>ಕಾರ್ಮಿಕ ಮುಖಂಡರಾದ ಆವರಗೆರೆ ಉಮೇಶ್, ಆವರಗೆರೆ ವಾಸು, ಟಿ.ಎಸ್. ನಾಗರಾಜ ಹಾಗೂ ಐರಣಿ ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ರದ್ಧತಿಗಾಗಿ ರಾಜ್ಯವ್ಯಾಪಿ ಹೋರಾಟ ರೂಪಿಸಲಾಗುವುದು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದರು.</p>.<p>‘ಯು.ಎ.ಪಿ.ಎ ನೆಪವೊಡ್ಡಿ ಆಡಳಿತ ಪಕ್ಷದವರು ಮಾನವಹಕ್ಕು ಹೋರಾಟಗಾರರು, ಚಿಂತಕರು, ಪತ್ರಕರ್ತರು, ಮಹಿಳಾ ಹೋರಾಟಗಾರರನ್ನು ಬಂಧಿಸುವ ಕೆಲಸ ನಡೆಯುತ್ತಿದೆ. ದೇಶದ್ರೋಹ ಕಾನೂನು ವಿಧಿ 124 ಇದೇ ರೀತಿ ದುರ್ಬಳಕೆಯಾಗುತ್ತಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. </p>.<p>‘ಭಯೋತ್ಪಾದನೆ ನಿಗ್ರಹದ ಹೆಸರಿನಲ್ಲಿ ಈವರೆಗೆ 5,229 ಪ್ರಕರಣಗಳು ದಾಖಲಿಸಲಾಗಿದ್ದು, ಹಲವರನ್ನು ಬಂಧಿಸಲಾಗಿದೆ. ಯುಎಪಿಎ ರಾಜಕೀಯ ದುರ್ಬಳಕೆಯಾಗುತ್ತಿರುವುದರ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಬ್ರಿಟಿಷರ ಕಾಲದ ಈ ಕಾನೂನು ಈಗ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ. ಇದನ್ನು ಜನವಿರೋಧಿ ಎಂದು ಪರಿಗಣಿಸಿ ರದ್ದು ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಈ ಕಾಯ್ದೆಯ ಬಗ್ಗೆ ಜನಾಂದೋಲನ ರೂಪಿಸಿಸಲು ಪ್ರತಿ ಜಿಲ್ಲೆಯಲ್ಲೂ ಪ್ರಗತಿಪರರು, ಸಮಾನ ಮನಸ್ಕರು ಹಾಗೂ ಜನಮುಖಿ ಚಿಂತಕರನ್ನು ಒಟ್ಟುಗೂಡಿಸಲಾಗುವುದು. ಬೀದರ್ ಚಾಮರಾಜನಗರ ಜಿಲ್ಲೆಯವರೆಗೆ ಮೆರವಣಿಗೆ, ಜಾಥಾಗಳ ಮೂಲಕ ಈ ಕಾಯ್ದೆಯ ರದ್ಧತಿಗೆ ಜನಾಂದೋಲನ ರೂಪಿಸಲಾಗುವುದು’ ಎಂದು ಹೇಳಿದರು.</p>.<p>ಮುಖಂಡ ಆವರಗೆರೆ ಚಂದ್ರು ಮಾತನಾಡಿ, ‘ಸರ್ಕಾರ ಜನರನ್ನು ಮತದಾರರನ್ನಾಗಿ ನೋಡುತ್ತಿದೆಯೇ ಹೊರತು ಮನುಷ್ಯರನ್ನಾಗಿ ಅಲ್ಲ. ಆಡಳಿತ ಹಾಗೂ ವಿರೋಧ ಪಕ್ಷಗಳೆರಡೂ ಒಂದೇ ನಾಣ್ಯದ ಮುಖಗಳು ಇದ್ದಂತೆ, ಮತಗಳಿಗಾಗಿ ಓಲೈಸುವ ಕೆಲಸ ಮಾಡುತ್ತಿವೆ’ ಎಂದು ಆರೋಪಿಸಿದರು.</p>.<p>ಜಿಲ್ಲಾ ಖಜಾಂಚಿ ಆನಂದರಾಜ್ ಮಾತನಾಡಿ, ‘ರಾಜಕಾರಣಿಗಳಿಗೆ ಜಿಲ್ಲೆಗೆ ಕೈಗಾರಿಕೆಗಳನ್ನು ತರಬೇಕು ಎಂಬ ಚಿಂತನೆ ಇಲ್ಲ. ಎಚ್.ಕೆ. ರಾಮಚಂದ್ರಪ್ಪ ಅವರು ಕೈಗಾರಿಕೆಗಳನ್ನು ತರಬೇಕು ಎಂಬ ಹಿತಾಸಕ್ತಿಯಿಂದ ಕೈಗಾರಿಕೆಗಳನ್ನು ತರಲು ಹೋರಾಟ ಮಾಡಿದ್ದರು’ ಎಂದು ಸ್ಮರಿಸಿದರು.</p>.<p>ಸಿಪಿಐ ಜಿಲ್ಲಾ ಕಾರ್ಯದರ್ಶಿಯಾಗಿ ಆವರಗೆರೆ ಚಂದ್ರು ಅವರನ್ನು ಘೋಷಿಸಿದ್ದು, ಶನಿವಾರ ನಡೆದ ಜಿಲ್ಲಾ ಮಂಡಳಿ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.</p>.<p>ಕಾರ್ಮಿಕ ಮುಖಂಡರಾದ ಆವರಗೆರೆ ಉಮೇಶ್, ಆವರಗೆರೆ ವಾಸು, ಟಿ.ಎಸ್. ನಾಗರಾಜ ಹಾಗೂ ಐರಣಿ ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>