<p><strong>ಹರಪನಹಳ್ಳಿ</strong>: ಪಟ್ಟಣದ ಹಿರೆಕೆರೆ ವೃತ್ತದಲ್ಲಿ ಸ್ಕಾರ್ಪಿಯೊ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ನೋಡಿ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಸೋಮವಾರ ಪರಾರಿಯಾದರು.</p>.<p>ನಾಲ್ಕು ಜನರು ಕೆಎ 02 ಎಮ್ಎ 2656 ಸ್ಕಾರ್ಪಿಯೊ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಪೊಲೀಸರನ್ನು ನೋಡಿದ ಅವರು, ದೂರದಲ್ಲಿಯೇ ವಾಹನ ನಿಲ್ಲಿಸಿ ಕೆರೆಯಂಗಳದಿಂದ ತಲೆಮರೆಸಿಕೊಂಡಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ಅಪರಿಚಿತರನ್ನು ಬೆನ್ನತ್ತಿದರೂ ಸಿಗದೇ ಓಡಿಹೋಗಿದ್ದಾರೆ ಎನ್ನಲಾಗಿದೆ.</p>.<p><strong>ನೆಲಮಂಗಲ ಕಳ್ಳತನದ ನಂಟು</strong></p>.<p>ನೆಲಮಂಗಲ ಬಳಿ ಇರುವ ಎಲ್.ಜಿ. ಶೋರೂಂ ಉಗ್ರಾಣವನ್ನು ದೋಚುತ್ತಿದ್ದಾಗ ಒಬ್ಬ ಕಳ್ಳ ಸಿಕ್ಕಿಬಿದ್ದಿದ್ದಾನೆ. ಗುಂಪಿನಲ್ಲಿದ್ದ ನಾಲ್ವರು ತಮ್ಮ ಸ್ವಂತ ಸ್ಕಾರ್ಪಿಯೊ ವಾಹನ ಸಮೇತ ಪರಾರಿಯಾಗಿದ್ದರು. ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿ ವಾಹನದ ನಂಬರ್ ಸಮೇತ ರಾಜ್ಯದ ಎಲ್ಲ ಠಾಣೆಗಳಿಗೂ ಮಾಹಿತಿ ನೀಡಿದ್ದರು. ಆ ಪ್ರಕರಣಕ್ಕೆ ಸಂಬಂಧಪಟ್ಟ ವಾಹನವೇ ಇರಬಹುದು ಎಂದು ಸ್ಥಳೀಯ ಪೊಲೀಸರು ಶಂಕಿಸಿದ್ದು, ನೆಲಮಂಗಲ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಅಲ್ಲಿನ ಪೊಲೀಸರು ಸ್ಥಳಕ್ಕೆ ಬಂದ ಬಳಿಕ ಖಚಿತ ಮಾಹಿತಿ ಲಭ್ಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ</strong>: ಪಟ್ಟಣದ ಹಿರೆಕೆರೆ ವೃತ್ತದಲ್ಲಿ ಸ್ಕಾರ್ಪಿಯೊ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ನೋಡಿ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಸೋಮವಾರ ಪರಾರಿಯಾದರು.</p>.<p>ನಾಲ್ಕು ಜನರು ಕೆಎ 02 ಎಮ್ಎ 2656 ಸ್ಕಾರ್ಪಿಯೊ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಪೊಲೀಸರನ್ನು ನೋಡಿದ ಅವರು, ದೂರದಲ್ಲಿಯೇ ವಾಹನ ನಿಲ್ಲಿಸಿ ಕೆರೆಯಂಗಳದಿಂದ ತಲೆಮರೆಸಿಕೊಂಡಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ಅಪರಿಚಿತರನ್ನು ಬೆನ್ನತ್ತಿದರೂ ಸಿಗದೇ ಓಡಿಹೋಗಿದ್ದಾರೆ ಎನ್ನಲಾಗಿದೆ.</p>.<p><strong>ನೆಲಮಂಗಲ ಕಳ್ಳತನದ ನಂಟು</strong></p>.<p>ನೆಲಮಂಗಲ ಬಳಿ ಇರುವ ಎಲ್.ಜಿ. ಶೋರೂಂ ಉಗ್ರಾಣವನ್ನು ದೋಚುತ್ತಿದ್ದಾಗ ಒಬ್ಬ ಕಳ್ಳ ಸಿಕ್ಕಿಬಿದ್ದಿದ್ದಾನೆ. ಗುಂಪಿನಲ್ಲಿದ್ದ ನಾಲ್ವರು ತಮ್ಮ ಸ್ವಂತ ಸ್ಕಾರ್ಪಿಯೊ ವಾಹನ ಸಮೇತ ಪರಾರಿಯಾಗಿದ್ದರು. ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿ ವಾಹನದ ನಂಬರ್ ಸಮೇತ ರಾಜ್ಯದ ಎಲ್ಲ ಠಾಣೆಗಳಿಗೂ ಮಾಹಿತಿ ನೀಡಿದ್ದರು. ಆ ಪ್ರಕರಣಕ್ಕೆ ಸಂಬಂಧಪಟ್ಟ ವಾಹನವೇ ಇರಬಹುದು ಎಂದು ಸ್ಥಳೀಯ ಪೊಲೀಸರು ಶಂಕಿಸಿದ್ದು, ನೆಲಮಂಗಲ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಅಲ್ಲಿನ ಪೊಲೀಸರು ಸ್ಥಳಕ್ಕೆ ಬಂದ ಬಳಿಕ ಖಚಿತ ಮಾಹಿತಿ ಲಭ್ಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>