<p><strong>ಜಗಳೂರು</strong>: ಲಾರಿ ಡಿಕ್ಕಿ ಹೊಡೆಸಿ ಪಾದಚಾರಿಯ ಸಾವಿಗೆ ಕಾರಣವಾಗಿದ್ದ ಚಾಲಕನನ್ನು 32 ವರ್ಷ ನಂತರ ಜಗಳೂರು ಪೊಲೀಸರು ಬಂಧಿಸಿದ್ದಾರೆ. </p>.<p>ಹಾಸನ ಜಿಲ್ಲೆಯ ಅರಸಿಕೆರೆಯ ಗಂಗಾಧರಪ್ಪ (67) ಬಂಧಿತ ಆರೋಪಿ.</p>.<p>ಘಟನೆ ವಿವರ: 1994ರಲ್ಲಿ ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ಸಮೀಪದ ಹಳೆಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಲಾರಿ ಹರಿಸಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ನಂತರ ಆರೋಪಿ ತಲೆಮರೆಸಿಕೊಂಡಿದ್ದನು.</p>.<p>ಜಗಳೂರಿನ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ 304 (ಎ) ಐಪಿಸಿ ಅಡಿ ಮೊಕದ್ದಮೆ ದಾಖಲಿಸಲಾಗಿತ್ತು. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡಿಕೊಂಡಿದ್ದ ಆರೋಪಿಯನ್ನು ಸಿಪಿಐ ಸಿದ್ರಾಮಯ್ಯ ಅವರ ಮಾರ್ಗದರ್ಶನದಲ್ಲಿ ಎಎಸ್ಐ ವೆಂಕಟೇಶ್ ಜಿ.ಟಿ. ಅವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಮೂರು ದಶಕದ ನಂತರ ಬಂಧಿಸಿರುವುದು ವಿಶೇಷ. ಜಗಳೂರಿನ ನ್ಯಾಯಾಲಯಕ್ಕೆ ಬುಧವಾರ ಹಾಜರಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ಲಾರಿ ಡಿಕ್ಕಿ ಹೊಡೆಸಿ ಪಾದಚಾರಿಯ ಸಾವಿಗೆ ಕಾರಣವಾಗಿದ್ದ ಚಾಲಕನನ್ನು 32 ವರ್ಷ ನಂತರ ಜಗಳೂರು ಪೊಲೀಸರು ಬಂಧಿಸಿದ್ದಾರೆ. </p>.<p>ಹಾಸನ ಜಿಲ್ಲೆಯ ಅರಸಿಕೆರೆಯ ಗಂಗಾಧರಪ್ಪ (67) ಬಂಧಿತ ಆರೋಪಿ.</p>.<p>ಘಟನೆ ವಿವರ: 1994ರಲ್ಲಿ ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ಸಮೀಪದ ಹಳೆಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಲಾರಿ ಹರಿಸಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ನಂತರ ಆರೋಪಿ ತಲೆಮರೆಸಿಕೊಂಡಿದ್ದನು.</p>.<p>ಜಗಳೂರಿನ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ 304 (ಎ) ಐಪಿಸಿ ಅಡಿ ಮೊಕದ್ದಮೆ ದಾಖಲಿಸಲಾಗಿತ್ತು. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡಿಕೊಂಡಿದ್ದ ಆರೋಪಿಯನ್ನು ಸಿಪಿಐ ಸಿದ್ರಾಮಯ್ಯ ಅವರ ಮಾರ್ಗದರ್ಶನದಲ್ಲಿ ಎಎಸ್ಐ ವೆಂಕಟೇಶ್ ಜಿ.ಟಿ. ಅವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಮೂರು ದಶಕದ ನಂತರ ಬಂಧಿಸಿರುವುದು ವಿಶೇಷ. ಜಗಳೂರಿನ ನ್ಯಾಯಾಲಯಕ್ಕೆ ಬುಧವಾರ ಹಾಜರಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>