<p><strong>ದಾವಣಗೆರೆ</strong>: ನಗರದ 31ನೇ ವಾರ್ಡ್ ವ್ಯಾಪ್ತಿಯ ಆಂಜನೇಯ ಮಿಲ್ ಸಮೀಪ ಬಾಲಕಿಗೆ ವಾಹನ ಡಿಕ್ಕಿ ಹೊಡೆದಿದ್ದರಿಂದ ಆಕ್ರೋಶಗೊಂಡ ಸ್ಥಳೀಯರು ದಾವಣಗೆರೆ–ಚನ್ನಗಿರಿ ರಾಜ್ಯ ಹೆದ್ದಾರಿ ತಡೆದು ಶನಿವಾರ ಪ್ರತಿಭಟನೆ ನಡೆಸಿದರು.</p><p>ಬಾಡಾ ಕ್ರಾಸ್ ಮೂಲಕ ಚನ್ನಗಿರಿಯತ್ತ ಸಾಗುವ ವಾಹನಗಳು ಆಂಜನೇಯ ಮಿಲ್ ಬಳಿ ವೇಗವಾಗಿ ಸಂಚರಿಸುತ್ತವೆ. ಇತ್ತೀಚೆಗೆ ಇಲ್ಲಿ ಅಪಘಾತಗಳು ಹೆಚ್ಚಾಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.</p><p>ಶನಿವಾರ ಬೆಳಿಗ್ಗೆ ಚನ್ನಗಿರಿ ಕಡೆಯಿಂದ ದಾವಣಗೆರೆಯತ್ತ ಬರುತ್ತಿದ್ದ ಕಾರು ಬಾಲಕಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p><p>ಅಪಘಾತದಿಂದ ಆಕ್ರೋಶಗೊಂಡ ಸ್ಥಳೀಯರು ವಾಹನಗಳು ತಡೆದರು. ದಾವಣಗೆರೆ–ಚನ್ನಗಿರಿ ಮಾರ್ಗ ರಾಜ್ಯ ಹೆದ್ದಾರಿಯಾಗಿ ಅಭಿವೃದ್ಧಿಗೊಂಡ ಬಳಿಕ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಹನಗಳ ವೇಗ ಮಿತಿಗೆ ಹಂಪ್ಸ್ ಹಾಕುವಂತೆ ಆಗ್ರಹಿಸಿದರು. ಸ್ಥಳಕ್ಕೆ ಧಾವಿಸಿದ ವಿದ್ಯಾನಗರ ಠಾಣೆಯ ಪೊಲೀಸರು ಪ್ರತಿಭಟನಕಾರರ ಮನವೊಲಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.</p><p>‘ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಸ್ಥಳೀಯರೊಂದಿಗೆ ಚರ್ಚಿಸಲಾಗಿದ್ದು, ಹಂಪ್ಸ್ ಅಳವಡಿಸಲು ತೀರ್ಮಾನಿಸಲಾಗಿದೆ’ ಎಂದು ಪಾಲಿಕೆ ಸದಸ್ಯ ಪಾಮೇನಹಳ್ಳಿ ನಾಗರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರದ 31ನೇ ವಾರ್ಡ್ ವ್ಯಾಪ್ತಿಯ ಆಂಜನೇಯ ಮಿಲ್ ಸಮೀಪ ಬಾಲಕಿಗೆ ವಾಹನ ಡಿಕ್ಕಿ ಹೊಡೆದಿದ್ದರಿಂದ ಆಕ್ರೋಶಗೊಂಡ ಸ್ಥಳೀಯರು ದಾವಣಗೆರೆ–ಚನ್ನಗಿರಿ ರಾಜ್ಯ ಹೆದ್ದಾರಿ ತಡೆದು ಶನಿವಾರ ಪ್ರತಿಭಟನೆ ನಡೆಸಿದರು.</p><p>ಬಾಡಾ ಕ್ರಾಸ್ ಮೂಲಕ ಚನ್ನಗಿರಿಯತ್ತ ಸಾಗುವ ವಾಹನಗಳು ಆಂಜನೇಯ ಮಿಲ್ ಬಳಿ ವೇಗವಾಗಿ ಸಂಚರಿಸುತ್ತವೆ. ಇತ್ತೀಚೆಗೆ ಇಲ್ಲಿ ಅಪಘಾತಗಳು ಹೆಚ್ಚಾಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.</p><p>ಶನಿವಾರ ಬೆಳಿಗ್ಗೆ ಚನ್ನಗಿರಿ ಕಡೆಯಿಂದ ದಾವಣಗೆರೆಯತ್ತ ಬರುತ್ತಿದ್ದ ಕಾರು ಬಾಲಕಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p><p>ಅಪಘಾತದಿಂದ ಆಕ್ರೋಶಗೊಂಡ ಸ್ಥಳೀಯರು ವಾಹನಗಳು ತಡೆದರು. ದಾವಣಗೆರೆ–ಚನ್ನಗಿರಿ ಮಾರ್ಗ ರಾಜ್ಯ ಹೆದ್ದಾರಿಯಾಗಿ ಅಭಿವೃದ್ಧಿಗೊಂಡ ಬಳಿಕ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಹನಗಳ ವೇಗ ಮಿತಿಗೆ ಹಂಪ್ಸ್ ಹಾಕುವಂತೆ ಆಗ್ರಹಿಸಿದರು. ಸ್ಥಳಕ್ಕೆ ಧಾವಿಸಿದ ವಿದ್ಯಾನಗರ ಠಾಣೆಯ ಪೊಲೀಸರು ಪ್ರತಿಭಟನಕಾರರ ಮನವೊಲಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.</p><p>‘ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಸ್ಥಳೀಯರೊಂದಿಗೆ ಚರ್ಚಿಸಲಾಗಿದ್ದು, ಹಂಪ್ಸ್ ಅಳವಡಿಸಲು ತೀರ್ಮಾನಿಸಲಾಗಿದೆ’ ಎಂದು ಪಾಲಿಕೆ ಸದಸ್ಯ ಪಾಮೇನಹಳ್ಳಿ ನಾಗರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>