<p><strong>ದಾವಣಗೆರೆ</strong>: ಕೈಯಲ್ಲಿ ಕಲ್ಲು ಹಿಡಿದು ಜನರಲ್ಲಿ ಭೀತಿ ಸೃಷ್ಟಿಸಿ ಒತ್ತಾಯ ಪೂರ್ವಕವಾಗಿ ‘ದಾವಣಗೆರೆ ಬಂದ್’ ನಡೆಸಿದ ಆರೋಪದ ಮೇರೆಗೆ ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ವಿರುದ್ಧ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.</p><p>ಭದ್ರಾ ಬಲದಂಡೆ ನಾಲೆ ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವುದನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಮತ್ತು ಜಿಲ್ಲಾ ರೈತ ಒಕ್ಕೂಟದ ವತಿಯಿಂದ ಶನಿವಾರ ‘ದಾವಣಗೆರೆ ಬಂದ್’ಗೆ ಕರೆನೀಡಲಾಗಿತ್ತು. ಈ ವೇಳೆ ಕೆಲವರು ಬಸ್ ಮತ್ತು ಆಟೊ ಚಾಲಕರು ಹಾಗೂ ವ್ಯಾಪಾರಿಗಳನ್ನು ಬೆದರಿಸಿದ್ದರು.</p><p>‘ಉದ್ದೇಶ ಪೂರ್ವಕವಾಗಿ ಭೀತಿ ಸೃಷ್ಟಿಸಿದ ಮತ್ತು ಅಪರಾಧಿಕ ಕೃತ್ಯದಲ್ಲಿ ತೊಡಗಿದ ಆರೋಪದ ಮೇರೆಗೆ ಲೋಕಿಕೆರೆ ನಾಗರಾಜ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೈಯಲ್ಲಿ ಕಲ್ಲು ಹಿಡಿದು ಜನರಲ್ಲಿ ಭೀತಿ ಸೃಷ್ಟಿಸಿ ಒತ್ತಾಯ ಪೂರ್ವಕವಾಗಿ ‘ದಾವಣಗೆರೆ ಬಂದ್’ ನಡೆಸಿದ ಆರೋಪದ ಮೇರೆಗೆ ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ವಿರುದ್ಧ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.</p><p>ಭದ್ರಾ ಬಲದಂಡೆ ನಾಲೆ ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವುದನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಮತ್ತು ಜಿಲ್ಲಾ ರೈತ ಒಕ್ಕೂಟದ ವತಿಯಿಂದ ಶನಿವಾರ ‘ದಾವಣಗೆರೆ ಬಂದ್’ಗೆ ಕರೆನೀಡಲಾಗಿತ್ತು. ಈ ವೇಳೆ ಕೆಲವರು ಬಸ್ ಮತ್ತು ಆಟೊ ಚಾಲಕರು ಹಾಗೂ ವ್ಯಾಪಾರಿಗಳನ್ನು ಬೆದರಿಸಿದ್ದರು.</p><p>‘ಉದ್ದೇಶ ಪೂರ್ವಕವಾಗಿ ಭೀತಿ ಸೃಷ್ಟಿಸಿದ ಮತ್ತು ಅಪರಾಧಿಕ ಕೃತ್ಯದಲ್ಲಿ ತೊಡಗಿದ ಆರೋಪದ ಮೇರೆಗೆ ಲೋಕಿಕೆರೆ ನಾಗರಾಜ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>