<p><strong>ತ್ಯಾವಣಿಗೆ</strong>: ಕಬ್ಬಳ-ದೊಡ್ಡಘಟ್ಟ ನಡುವೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನಿರಾಕರಣೆ ಆರೋಪ ಸಂಬಂಧ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಎಚ್ಒ ಡಾ. ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಗಾಯಾಳುಗಳನ್ನು ಆಸ್ಪತ್ರೆ ಮುಂಭಾಗ ಹಾಕಿ ಹೋಗಿರುವುದು ಸರಿಯಲ್ಲ. ಸಾರ್ವಜನಿಕರು ಸಹಾಯ ಮಾಡದೇ ಮೊಬೈಲ್ನಲ್ಲಿ ವಿಡಿಯೊ, ಫೋಟೊ ತೆಗೆಯುವುದರ ಬದಲು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದರೆ ಜೀವ ಉಳಿಸಬಹುದಿತ್ತು’ ಎಂದರು.</p>.<p>ಆಂಬುಲೆನ್ಸ್ ವಾಹನ ಸಿಬ್ಬಂದಿ ರಜೆಯಲ್ಲಿದ್ದರಿಂದ ಸಕಾಲಕ್ಕೆ ಆಂಬುಲೆನ್ಸ್ ದೊರೆಯುವುದು ವಿಳಂಬವಾಗಿದೆ. ಆಸ್ಪತ್ರೆಗೆ ಶೀಘ್ರವಾಗಿ ಸ್ಟಾಫ್ ನರ್ಸ್ ಆಯೋಜಿಸಲಾಗುವುದು. ಮುಂದಿನ ದಿನಗಳಲ್ಲಿ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಆಸ್ಪತ್ರೆಯಲ್ಲಿ ಎಲ್ಲಾ ಸಂದರ್ಭಗಳಲ್ಲಿ ವೈದ್ಯರು, ಶುಶ್ರೂಷಕಿಯರು ಇರುವುದಿಲ್ಲ. ಅಪಘಾತದಂತಹ ವೇಳೆ ಸಮುದಾಯದವರು ಸಹಾಯ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಪ್ರಭು, ಎಂ.ಬಿ. ಸುರೇಶ್, ವೈದ್ಯಾಧಿಕಾರಿ ಡಾ. ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾವಣಿಗೆ</strong>: ಕಬ್ಬಳ-ದೊಡ್ಡಘಟ್ಟ ನಡುವೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನಿರಾಕರಣೆ ಆರೋಪ ಸಂಬಂಧ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಎಚ್ಒ ಡಾ. ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಗಾಯಾಳುಗಳನ್ನು ಆಸ್ಪತ್ರೆ ಮುಂಭಾಗ ಹಾಕಿ ಹೋಗಿರುವುದು ಸರಿಯಲ್ಲ. ಸಾರ್ವಜನಿಕರು ಸಹಾಯ ಮಾಡದೇ ಮೊಬೈಲ್ನಲ್ಲಿ ವಿಡಿಯೊ, ಫೋಟೊ ತೆಗೆಯುವುದರ ಬದಲು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದರೆ ಜೀವ ಉಳಿಸಬಹುದಿತ್ತು’ ಎಂದರು.</p>.<p>ಆಂಬುಲೆನ್ಸ್ ವಾಹನ ಸಿಬ್ಬಂದಿ ರಜೆಯಲ್ಲಿದ್ದರಿಂದ ಸಕಾಲಕ್ಕೆ ಆಂಬುಲೆನ್ಸ್ ದೊರೆಯುವುದು ವಿಳಂಬವಾಗಿದೆ. ಆಸ್ಪತ್ರೆಗೆ ಶೀಘ್ರವಾಗಿ ಸ್ಟಾಫ್ ನರ್ಸ್ ಆಯೋಜಿಸಲಾಗುವುದು. ಮುಂದಿನ ದಿನಗಳಲ್ಲಿ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಆಸ್ಪತ್ರೆಯಲ್ಲಿ ಎಲ್ಲಾ ಸಂದರ್ಭಗಳಲ್ಲಿ ವೈದ್ಯರು, ಶುಶ್ರೂಷಕಿಯರು ಇರುವುದಿಲ್ಲ. ಅಪಘಾತದಂತಹ ವೇಳೆ ಸಮುದಾಯದವರು ಸಹಾಯ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಪ್ರಭು, ಎಂ.ಬಿ. ಸುರೇಶ್, ವೈದ್ಯಾಧಿಕಾರಿ ಡಾ. ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>