ಸೂಳೆಕೆರೆ ಅಚ್ಚುಕಟ್ಟು ಪ್ರದೇಶದ ಸೂಳೆಕೆರೆಯ ಬಸವನ ನಾಲಾ ಮತ್ತು ಸಿದ್ಧನ ನಾಲಾ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 6,000 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಭತ್ತದ ನಾಟಿ ಮಾಡಲಾಗುತ್ತಿದೆ. ನಾಲೆಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛಗೊಳಿಸದೇ ಇರುವುದರಿಂದ ಗಿಡಗಳು ಬೆಳೆದು ನೀರು ಹರಿಯಲು ಅಡ್ಡಿಯಾಗಿದೆ ಎಂದು ಕಣಿವೆ ಬಿಳಚಿ ನೀರು ಬಳಕೆದಾರರ ಸಂಘದ ಅಧ್ಯಕ್ಷ ಪಿ.ಶೇಖರಪ್ಪ ದೂರಿದರು.