<p><strong>ದಾವಣಗೆರೆ:</strong> ‘ನಾಟಕಗಳಲ್ಲಿ ದೃಶ್ಯ ವೈಭವ ಇದ್ದರೂ, ಅಭಿನಯ ಎಂಬ ಅಧ್ಯಾತ್ಮ ಇಲ್ಲದಿದ್ದರೆ ಪ್ರಯೋಜನವಿಲ್ಲ’ ಎಂದು ಚಲನಚಿತ್ರ ನಟ, ರಂಗಕರ್ಮಿ ಮಂಡ್ಯ ರಮೇಶ್ ಅಭಿಪ್ರಾಯಪಟ್ಟರು. </p>.<p>ಇಲ್ಲಿನ ದೃಶ್ಯಕಲಾ ಮಹಾವಿದ್ಯಾಲಯದ ಕಲಾ ಗ್ಯಾಲರಿಯಲ್ಲಿ ಕಲಾವಿದ ಅಶೋಕ ಯು. ಅವರ ‘ವರ್ಣ ವಿಕಾಸ’ ಚಿತ್ರಕಲಾ ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿ, ‘ರಂಗಭೂಮಿಯು ಅತ್ಯಂತ ಸರಳ ಮತ್ತು ಸೌಂದರ್ಯದಿಂದ ಕೂಡಿದ ಮಾಧ್ಯಮವಾಗಿದೆ’ ಎಂದರು. </p>.<p>‘ಕಲಾವಿದ ಅಶೋಕ ಯು. ಅವರ ರೇಖಾಚಿತ್ರಗಳಲ್ಲಿ ಸರಳತೆಯೇ ಸೌಂದರ್ಯವಾಗಿದ್ದು, ಆಳವಾದ ಅರಿವು ಮತ್ತು ಮನಸ್ಸಿನ ಶ್ರೀಮಂತಿಕೆಯನ್ನು ಬಿಂಬಿಸುತ್ತವೆ’ ಎಂದರು. </p>.<p>‘ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಚಿತ್ರಕಲೆಗೆ ಆದ್ಯತೆ ಕೊಟ್ಟಿರುವಂತೆ ಮುಂದಿನ ದಿನಗಳಲ್ಲಿ ರಂಗಭೂಮಿ, ಜಾನಪದ ಪ್ರಕಾರಗಳಿಗೂ ಆದ್ಯತೆ ನೀಡಬೇಕು. ರಂಗಭೂಮಿ ಸದಾ ಜೀವಂತವಾಗಿರಲಿ’ ಎಂದು ಆಶಿಸಿದರು. </p>.<p>‘ರಂಗಭೂಮಿಗೂ ಚಿತ್ರಕಲೆಗೂ ಅವಿನಾಭಾವ ಸಂಬಂಧವಿದೆ. ಮುಂದಿನ ದಿನಗಳಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಚಿತ್ರಕಲೆಗೆ ಸಂಬಂಧಿಸಿದ ಪ್ರದರ್ಶನ ಏರ್ಪಡಿಸಲಾಗುವುದು’ ಎಂದು ಅನ್ವೇಷಕರು ಆರ್ಟ್ ಫೌಂಡೇಷನ್ ಟ್ರಸ್ಟಿ ಸಿದ್ಧರಾಜು ಎಸ್.ಎಸ್. ತಿಳಿಸಿದರು. </p>.<p>ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಸತೀಶ್ ಕುಮಾರ್ ಪಿ.ವಲ್ಲೇಪುರೆ ಅಧ್ಯಕ್ಷತೆ ವಹಿಸಿದ್ದರು. </p>.<p>ಸರ್.ಎಂ.ವಿ. ಪಿಯು ಕಾಲೇಜಿನ ಕಾರ್ಯದರ್ಶಿ ಎಸ್.ಜೆ ಶ್ರೀಧರ್, ಕಲಾವಿದ ಅಶೋಕ ಯು., ಚಿತ್ರಕಲಾ ಶಿಕ್ಷಕ ರಾಘವೇಂದ್ರ ನಾಯಕ ಎನ್.ಟಿ. ಉಪಸ್ಥಿತರಿದ್ದರು. ಕಲಾ ವಿಮರ್ಶಕ ದತ್ತಾತ್ರೇಯ ಎನ್. ಭಟ್ಟ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ನಾಟಕಗಳಲ್ಲಿ ದೃಶ್ಯ ವೈಭವ ಇದ್ದರೂ, ಅಭಿನಯ ಎಂಬ ಅಧ್ಯಾತ್ಮ ಇಲ್ಲದಿದ್ದರೆ ಪ್ರಯೋಜನವಿಲ್ಲ’ ಎಂದು ಚಲನಚಿತ್ರ ನಟ, ರಂಗಕರ್ಮಿ ಮಂಡ್ಯ ರಮೇಶ್ ಅಭಿಪ್ರಾಯಪಟ್ಟರು. </p>.<p>ಇಲ್ಲಿನ ದೃಶ್ಯಕಲಾ ಮಹಾವಿದ್ಯಾಲಯದ ಕಲಾ ಗ್ಯಾಲರಿಯಲ್ಲಿ ಕಲಾವಿದ ಅಶೋಕ ಯು. ಅವರ ‘ವರ್ಣ ವಿಕಾಸ’ ಚಿತ್ರಕಲಾ ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿ, ‘ರಂಗಭೂಮಿಯು ಅತ್ಯಂತ ಸರಳ ಮತ್ತು ಸೌಂದರ್ಯದಿಂದ ಕೂಡಿದ ಮಾಧ್ಯಮವಾಗಿದೆ’ ಎಂದರು. </p>.<p>‘ಕಲಾವಿದ ಅಶೋಕ ಯು. ಅವರ ರೇಖಾಚಿತ್ರಗಳಲ್ಲಿ ಸರಳತೆಯೇ ಸೌಂದರ್ಯವಾಗಿದ್ದು, ಆಳವಾದ ಅರಿವು ಮತ್ತು ಮನಸ್ಸಿನ ಶ್ರೀಮಂತಿಕೆಯನ್ನು ಬಿಂಬಿಸುತ್ತವೆ’ ಎಂದರು. </p>.<p>‘ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಚಿತ್ರಕಲೆಗೆ ಆದ್ಯತೆ ಕೊಟ್ಟಿರುವಂತೆ ಮುಂದಿನ ದಿನಗಳಲ್ಲಿ ರಂಗಭೂಮಿ, ಜಾನಪದ ಪ್ರಕಾರಗಳಿಗೂ ಆದ್ಯತೆ ನೀಡಬೇಕು. ರಂಗಭೂಮಿ ಸದಾ ಜೀವಂತವಾಗಿರಲಿ’ ಎಂದು ಆಶಿಸಿದರು. </p>.<p>‘ರಂಗಭೂಮಿಗೂ ಚಿತ್ರಕಲೆಗೂ ಅವಿನಾಭಾವ ಸಂಬಂಧವಿದೆ. ಮುಂದಿನ ದಿನಗಳಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಚಿತ್ರಕಲೆಗೆ ಸಂಬಂಧಿಸಿದ ಪ್ರದರ್ಶನ ಏರ್ಪಡಿಸಲಾಗುವುದು’ ಎಂದು ಅನ್ವೇಷಕರು ಆರ್ಟ್ ಫೌಂಡೇಷನ್ ಟ್ರಸ್ಟಿ ಸಿದ್ಧರಾಜು ಎಸ್.ಎಸ್. ತಿಳಿಸಿದರು. </p>.<p>ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಸತೀಶ್ ಕುಮಾರ್ ಪಿ.ವಲ್ಲೇಪುರೆ ಅಧ್ಯಕ್ಷತೆ ವಹಿಸಿದ್ದರು. </p>.<p>ಸರ್.ಎಂ.ವಿ. ಪಿಯು ಕಾಲೇಜಿನ ಕಾರ್ಯದರ್ಶಿ ಎಸ್.ಜೆ ಶ್ರೀಧರ್, ಕಲಾವಿದ ಅಶೋಕ ಯು., ಚಿತ್ರಕಲಾ ಶಿಕ್ಷಕ ರಾಘವೇಂದ್ರ ನಾಯಕ ಎನ್.ಟಿ. ಉಪಸ್ಥಿತರಿದ್ದರು. ಕಲಾ ವಿಮರ್ಶಕ ದತ್ತಾತ್ರೇಯ ಎನ್. ಭಟ್ಟ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>