<p>ದಾವಣಗೆರೆ: ವೈದ್ಯಕೀಯ ಅರ್ಹತೆ ಹೊಂದಿಲ್ಲದವರು ಚರ್ಮ ಹಾಗೂ ಕೂದಲು ಚಿಕಿತ್ಸಾ ತಜ್ಞರ ಹೆಸರಿನಲ್ಲಿ ಮೋಸ ಮಾಡುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಉಂಟು ಮಾಡುವ ನಕಲಿ ತಜ್ಞರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚರ್ಮ ವೈದ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ವೈದ್ಯಕೀಯ ಅರ್ಹತೆ ಇಲ್ಲದವರು ಚರ್ಮ, ಕೂದಲು ಹಾಗೂ ಸೌಂದರ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಬ್ಯೂಟಿಷಿಯನ್ಗಳು ಕೂಡ ಜನರಿಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಸಾರ್ವಜನಿಕರಿಗೆ ಮೋಸ ಮಾಡಿ ಅನ್ಯಾಯ ಎಸಗುತ್ತಿದ್ದಾರೆ ಎಂದು ಗಮನ ಸೆಳೆದರು.</p>.<p>‘ಚರ್ಮ ಮತ್ತು ಕೂದಲು ಕ್ಲಿನಿಕ್’ಗಳು ಎಲ್ಲೆಡೆ ತಲೆ ಎತ್ತಿವೆ. ಲೇಸರ್, ಮೈಕ್ರೋನೀಡ್ಲಿಂಗ್ ಯಂತ್ರಗಳಂತಹ ವೈದ್ಯಕೀಯ ಸಾಧನಗಳನ್ನು ಬಳಸಲಾಗುತ್ತಿದೆ. ಇವುಗಳಿಗೆ ಕಾನೂನಿನ ಪ್ರಕಾರ ಮಾನ್ಯತೆ ನೀಡಬಾರದು. ನಕಲಿ ತಜ್ಞರು ಮಾಡಿದ ಚಿಕಿತ್ಸೆಗಳಿಂದ ಮುಖ-ಕೂದಲು-ಚರ್ಮಗಳಿಗೆ ಹಾನಿ ಮಾಡಿಕೊಂಡ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಗಮನ ಹರಿಸಬೇಕು ಎಂದು ಮನವಿ ಮಾಡಿದರು.</p>.<p>ವೈದ್ಯರಾದ ಡಾ.ಮಂಜುನಾಥ್ ಹುಲ್ಮನಿ, ಡಾ.ಬಿ.ಕೆ. ವಿಶ್ವನಾಥ, ಡಾ.ಸೂಗರೆಡ್ಡಿ, ಡಾ.ಮಂಗಳ ಎಚ್.ಸಿ, ಡಾ.ಲಿಂಗರಾಜ, ಡಾ.ರೂಪ ಎಂ.ಸಿ, ಡಾ.ಸೌಮ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ವೈದ್ಯಕೀಯ ಅರ್ಹತೆ ಹೊಂದಿಲ್ಲದವರು ಚರ್ಮ ಹಾಗೂ ಕೂದಲು ಚಿಕಿತ್ಸಾ ತಜ್ಞರ ಹೆಸರಿನಲ್ಲಿ ಮೋಸ ಮಾಡುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಉಂಟು ಮಾಡುವ ನಕಲಿ ತಜ್ಞರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚರ್ಮ ವೈದ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ವೈದ್ಯಕೀಯ ಅರ್ಹತೆ ಇಲ್ಲದವರು ಚರ್ಮ, ಕೂದಲು ಹಾಗೂ ಸೌಂದರ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಬ್ಯೂಟಿಷಿಯನ್ಗಳು ಕೂಡ ಜನರಿಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಸಾರ್ವಜನಿಕರಿಗೆ ಮೋಸ ಮಾಡಿ ಅನ್ಯಾಯ ಎಸಗುತ್ತಿದ್ದಾರೆ ಎಂದು ಗಮನ ಸೆಳೆದರು.</p>.<p>‘ಚರ್ಮ ಮತ್ತು ಕೂದಲು ಕ್ಲಿನಿಕ್’ಗಳು ಎಲ್ಲೆಡೆ ತಲೆ ಎತ್ತಿವೆ. ಲೇಸರ್, ಮೈಕ್ರೋನೀಡ್ಲಿಂಗ್ ಯಂತ್ರಗಳಂತಹ ವೈದ್ಯಕೀಯ ಸಾಧನಗಳನ್ನು ಬಳಸಲಾಗುತ್ತಿದೆ. ಇವುಗಳಿಗೆ ಕಾನೂನಿನ ಪ್ರಕಾರ ಮಾನ್ಯತೆ ನೀಡಬಾರದು. ನಕಲಿ ತಜ್ಞರು ಮಾಡಿದ ಚಿಕಿತ್ಸೆಗಳಿಂದ ಮುಖ-ಕೂದಲು-ಚರ್ಮಗಳಿಗೆ ಹಾನಿ ಮಾಡಿಕೊಂಡ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಗಮನ ಹರಿಸಬೇಕು ಎಂದು ಮನವಿ ಮಾಡಿದರು.</p>.<p>ವೈದ್ಯರಾದ ಡಾ.ಮಂಜುನಾಥ್ ಹುಲ್ಮನಿ, ಡಾ.ಬಿ.ಕೆ. ವಿಶ್ವನಾಥ, ಡಾ.ಸೂಗರೆಡ್ಡಿ, ಡಾ.ಮಂಗಳ ಎಚ್.ಸಿ, ಡಾ.ಲಿಂಗರಾಜ, ಡಾ.ರೂಪ ಎಂ.ಸಿ, ಡಾ.ಸೌಮ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>