<p><strong>ದಾವಣಗೆರೆ</strong>: ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಆಗಿದೆಯೇ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಿಸಿರುತ್ತಾರೆ. ಉಲ್ಲಂಘನೆ ಆಗಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.</p>.<p>ಹರಪನಹಳ್ಳಿ ತಾಲ್ಲೂಕಿನ ಲಕ್ಮೀಪುರದಲ್ಲಿ ಸೋಮವಾರ ನಡೆದ ಮದುವೆಯಲ್ಲಿ 10ಕ್ಕೂ ಅಧಿಕ ಸಚಿವರು ಭಾಗವಹಿಸಿದ್ದರು. ಕೋವಿಡ್-19ನಿಯಮ ಉಲ್ಲಂಘನೆ ಆಗಿತ್ತು. ಈ ಬಗ್ಗೆ ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.</p>.<p>ಪರಮೇಶ್ವರ ನಾಯ್ಕ ನನಗೂ ಸ್ನೇಹಿತರು. ಮಗನ ಮದುವೆ ಮಾಡಲು ಸ್ವತಂತ್ರರು. ಕೊರೊನಾ ಬಾರದಿರಲಿ ಎಂದು ಕೆಲವು ನಿಯಮಗಳನ್ನು ಮಾಡಲಾಗಿದೆ ಎಂದರು.</p>.<p>ಪೋಲಿಸ್ ಇಲಾಖೆಯ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಔರದ್ಕರ್ ವರದಿ ಜಾರಿ ಮಾಡಿ ಪೊಲೀಸರ ಮೂಲವೇತನ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಆಗಿದೆಯೇ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಿಸಿರುತ್ತಾರೆ. ಉಲ್ಲಂಘನೆ ಆಗಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.</p>.<p>ಹರಪನಹಳ್ಳಿ ತಾಲ್ಲೂಕಿನ ಲಕ್ಮೀಪುರದಲ್ಲಿ ಸೋಮವಾರ ನಡೆದ ಮದುವೆಯಲ್ಲಿ 10ಕ್ಕೂ ಅಧಿಕ ಸಚಿವರು ಭಾಗವಹಿಸಿದ್ದರು. ಕೋವಿಡ್-19ನಿಯಮ ಉಲ್ಲಂಘನೆ ಆಗಿತ್ತು. ಈ ಬಗ್ಗೆ ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.</p>.<p>ಪರಮೇಶ್ವರ ನಾಯ್ಕ ನನಗೂ ಸ್ನೇಹಿತರು. ಮಗನ ಮದುವೆ ಮಾಡಲು ಸ್ವತಂತ್ರರು. ಕೊರೊನಾ ಬಾರದಿರಲಿ ಎಂದು ಕೆಲವು ನಿಯಮಗಳನ್ನು ಮಾಡಲಾಗಿದೆ ಎಂದರು.</p>.<p>ಪೋಲಿಸ್ ಇಲಾಖೆಯ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಔರದ್ಕರ್ ವರದಿ ಜಾರಿ ಮಾಡಿ ಪೊಲೀಸರ ಮೂಲವೇತನ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>