ಅರಸೀಕೆರೆ (ಉಚ್ಚಂಗಿದುರ್ಗ): ಚಿತ್ರ ನಟ ಸುದೀಪ್ ಅವರ ಜನ್ಮದಿನದ ಅಂಗವಾಗಿ ಅಖಿಲ ಭಾರತ ಬಾದ್ಷಾ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘದಿಂದ ಅರಸೀಕೆರೆಯ ಶಾಂತ ಪ್ರಕಾಶ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳಿಗೆ ಬಣ್ಣ ಬಳಿದಿದ್ದಾರೆ.
₹ 15 ಸಾವಿರ ವೆಚ್ಚ ಮಾಡಿ 8 ಅಭಿಮಾನಿಗಳು ಶಾಲೆಗೆ ಬಣ್ಣ ಬಳಿದಿದ್ದು, ಶಾಲೆಗೆ ಮೆರುಗು ಬಂದಿದೆ.
ಶನಿವಾರ ನಡೆದ ಕಾರ್ಯಕ್ರಮವನ್ನು ಸಂಘದ ರಾಜ್ಯ ಘಟಕದ ಅಧ್ಯಕ್ಷ ನವೀನ್ ಗೌಡ, ಉಪಾಧ್ಯಕ್ಷ ಜಗದೀಶ್ ಉದ್ಘಾಟಿಸಿದರು.
ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ವೈ.ಡಿ. ಅಣ್ಣಪ್ಪ
ಅವರ ಪುತ್ರರು ಕೇಕ್ ಕತ್ತರಿಸುವ ಮೂಲಕ ನೆಚ್ಚಿನ ನಟನಿಗೆ ಶುಭ ಹಾರೈಸಿದರು. ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಅನ್ನ ಸಂತರ್ಪಣೆಯೂ ನಡೆಯಿತು.