ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಗುರುವಾರ ಅರಳೀಮರ ಸಮೀಪದ ಇಮಾಂ ನಗರ ಸುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಲಸಿಕಾ ಅಭಿಯಾನ ನಡೆಸಲಾಯಿತು.
ಈ ಅಭಿಯಾನದ ಬಗ್ಗೆ ಮಾಹಿತಿ ಪಡೆದಿರುವ ಜನರು ಗುರುವಾರ ಹೆಚ್ಚಿಗೆ ವಿರೋಧ ವ್ಯಕ್ತಪಡಿಸದೇ ಲಸಿಕೆ ಹಾಕಿಸಿಕೊಂಡರು. ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಥಳೀಯ ಮುಖಂಡರಾದ ಮಹಮ್ಮದ್ ಚಾರ್ಲಿ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.