ದೇಶದ ನಾನಾ ಭಾಗಗಳಿಂದ ಸೇವಾಲಾಲ್ ಭಕ್ತರು ಇಲ್ಲಿಗೆ ಬರುತ್ತಾರೆ. ಮಾಲಾಧಾರಿಗಳು ಪಾದಯಾತ್ರೆ ಮೂಲಕ ಬರುತ್ತಾರೆ. ಮೂಲಸೌಲಭ್ಯ, ಸಾರಿಗೆ, ವಸತಿ, ಊಟ, ಶೌಚಾಲಯ, ಬೆಳಕಿನ ವ್ಯವಸ್ಥೆ ಒದಗಿಸಿ ಜಯಂತಿಯನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಭಾಯಗಡ್ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳು ಮುಂದಾಗಿವೆ.