<p><strong>ದಾವಣಗೆರೆ</strong>: ‘ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಿ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬದಲು, ಸೀಟು ಮಾರಾಟದ ಮೂಲಕ ಸರ್ಕಾರವೇ ವಿದ್ಯಾರ್ಥಿಗಳನ್ನು ಶೋಚನೀಯ ಸ್ಥಿತಿಗೆ ತಳ್ಳುತ್ತಿದೆ. ಈ ರೀತಿ ಜನರಿಗೆ ಮೋಸ ಮಾಡುತ್ತಿದೆ’ ಎಂದು ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಬೇಸರ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಮಂಗಳವಾರ ಹಮ್ಮಿಕೊಂಡಿದ್ದ ‘ಯುಬಿಡಿಟಿ ಕಾಲೇಜು ಉಳಿಸಿ’ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಶಾಲೆ–ಕಾಲೇಜುಗಳು ಸಮರ್ಪಕ ಸೌಲಭ್ಯಗಳಿಲ್ಲದೇ ಸೊರಗುತ್ತಿವೆ. ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದೇ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ನೂತನ ಶಿಕ್ಷಣ ನೀತಿಯ ವಿರುದ್ಧ ನಡೆದ ಚಳವಳಿಯ ಮಾದರಿಯಲ್ಲಿ ಯುಬಿಡಿಟಿ ಕಾಲೇಜು ರಕ್ಷಣೆಗೆ ಹೋರಾಟ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಸರ್ಕಾರಿ ಕಾಲೇಜುಗಳಲ್ಲಿ ಪೇಮೆಂಟ್ ಕೋಟಾ ಎಂಬ ಕೆಟ್ಟ ಸಂಪ್ರದಾಯ ಆರಂಭಿಸಲಾಗುತ್ತಿದೆ. ಒಂದೇ ತರಗತಿಯಲ್ಲಿ ಓದುವ ವಿದ್ಯಾರ್ಥಿಗಳನ್ನು ಒಡೆದು ಆಳುವ ನೀತಿ ಇದಾಗಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ತಿಳಿಸಿದರು.</p>.<p>‘ರಾಜ್ಯದ ಬಡ ಜನರಿಗಾಗಿ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಉಚಿತ ಶಿಕ್ಷಣವನ್ನು 6ನೇ ಗ್ಯಾರಂಟಿಯಾಗಿ ರೂಪಿಸಿದರೆ ಅನುಕೂಲ’ ಎಂದರು.</p>.<p>‘ಯುಬಿಡಿಟಿ ಕಾಲೇಜಿನ ದುಃಸ್ಥಿತಿ ಬೇಸರ ಮೂಡಿಸಿದೆ. ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯ ಕಾಲೇಜು ಪ್ರವೇಶಾತಿಗೆ ಹೆಚ್ಚಿನ ಪ್ರಮಾಣದ ಶುಲ್ಕ ನಿಗದಿ ಮಾಡಿದ್ದು ಸರಿಯಲ್ಲ’ ಎಂದು ಡಿಆರ್ಎಂ ವಿಜ್ಞಾನ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಅಹಿಂದ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ, ವಿದ್ಯಾರ್ಥಿಗಳ ಕೂಗು ಆಲಿಸಬೇಕು. ಶಾಸಕ ಶಾಮನೂರು ಶಿವಶಂಕರಪ್ಪ ಇತ್ತ ಗಮನ ಹರಿಸಬೇಕು’ ಎಂದರು.</p>.<p>ಯುಬಿಡಿಟಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸುರೇಶ್ ಚಂದ್ರ ಮೋಹನ್, ಎಐಡಿಎಸ್ಒ ರಾಜ್ಯ ಘಟಕದ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಕಾರ್ಯದರ್ಶಿ ಮಹಾಂತೇಶ್, ಜಿಲ್ಲಾ ಘಟಕದ ಅಧ್ಯಕ್ಷೆ ಪೂಜಾ ನಂದಿಹಳ್ಳಿ, ಕಾರ್ಯದರ್ಶಿ ಟಿ.ಎಸ್.ಸುಮನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಿ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬದಲು, ಸೀಟು ಮಾರಾಟದ ಮೂಲಕ ಸರ್ಕಾರವೇ ವಿದ್ಯಾರ್ಥಿಗಳನ್ನು ಶೋಚನೀಯ ಸ್ಥಿತಿಗೆ ತಳ್ಳುತ್ತಿದೆ. ಈ ರೀತಿ ಜನರಿಗೆ ಮೋಸ ಮಾಡುತ್ತಿದೆ’ ಎಂದು ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಬೇಸರ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಮಂಗಳವಾರ ಹಮ್ಮಿಕೊಂಡಿದ್ದ ‘ಯುಬಿಡಿಟಿ ಕಾಲೇಜು ಉಳಿಸಿ’ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಶಾಲೆ–ಕಾಲೇಜುಗಳು ಸಮರ್ಪಕ ಸೌಲಭ್ಯಗಳಿಲ್ಲದೇ ಸೊರಗುತ್ತಿವೆ. ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದೇ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ನೂತನ ಶಿಕ್ಷಣ ನೀತಿಯ ವಿರುದ್ಧ ನಡೆದ ಚಳವಳಿಯ ಮಾದರಿಯಲ್ಲಿ ಯುಬಿಡಿಟಿ ಕಾಲೇಜು ರಕ್ಷಣೆಗೆ ಹೋರಾಟ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಸರ್ಕಾರಿ ಕಾಲೇಜುಗಳಲ್ಲಿ ಪೇಮೆಂಟ್ ಕೋಟಾ ಎಂಬ ಕೆಟ್ಟ ಸಂಪ್ರದಾಯ ಆರಂಭಿಸಲಾಗುತ್ತಿದೆ. ಒಂದೇ ತರಗತಿಯಲ್ಲಿ ಓದುವ ವಿದ್ಯಾರ್ಥಿಗಳನ್ನು ಒಡೆದು ಆಳುವ ನೀತಿ ಇದಾಗಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ತಿಳಿಸಿದರು.</p>.<p>‘ರಾಜ್ಯದ ಬಡ ಜನರಿಗಾಗಿ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಉಚಿತ ಶಿಕ್ಷಣವನ್ನು 6ನೇ ಗ್ಯಾರಂಟಿಯಾಗಿ ರೂಪಿಸಿದರೆ ಅನುಕೂಲ’ ಎಂದರು.</p>.<p>‘ಯುಬಿಡಿಟಿ ಕಾಲೇಜಿನ ದುಃಸ್ಥಿತಿ ಬೇಸರ ಮೂಡಿಸಿದೆ. ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯ ಕಾಲೇಜು ಪ್ರವೇಶಾತಿಗೆ ಹೆಚ್ಚಿನ ಪ್ರಮಾಣದ ಶುಲ್ಕ ನಿಗದಿ ಮಾಡಿದ್ದು ಸರಿಯಲ್ಲ’ ಎಂದು ಡಿಆರ್ಎಂ ವಿಜ್ಞಾನ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಅಹಿಂದ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ, ವಿದ್ಯಾರ್ಥಿಗಳ ಕೂಗು ಆಲಿಸಬೇಕು. ಶಾಸಕ ಶಾಮನೂರು ಶಿವಶಂಕರಪ್ಪ ಇತ್ತ ಗಮನ ಹರಿಸಬೇಕು’ ಎಂದರು.</p>.<p>ಯುಬಿಡಿಟಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸುರೇಶ್ ಚಂದ್ರ ಮೋಹನ್, ಎಐಡಿಎಸ್ಒ ರಾಜ್ಯ ಘಟಕದ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಕಾರ್ಯದರ್ಶಿ ಮಹಾಂತೇಶ್, ಜಿಲ್ಲಾ ಘಟಕದ ಅಧ್ಯಕ್ಷೆ ಪೂಜಾ ನಂದಿಹಳ್ಳಿ, ಕಾರ್ಯದರ್ಶಿ ಟಿ.ಎಸ್.ಸುಮನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>