<p><strong>ದಾವಣಗೆರೆ:</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p>ಭದ್ರತೆ ಕಾರಣದಿಂದ ವಿವಿಧ ಸ್ಥಳಗಳಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ಸಂಸದ ಜಿ.ಎಂ. ಸಿದ್ದೇಶ್ವರ ಒಡೆತನದ ಜಿಎಂಐಟಿ ಕ್ಯಾಂಪಸ್ನಲ್ಲೇನಿಗದಿಪಡಿಸಲಾಗಿದೆ. ಮಧ್ಯಾಹ್ನ 3ಕ್ಕೆ ದಾವಣಗೆರೆಯ ಗಾಂಧಿ ಭವನ, ಕೊಂಡಜ್ಜಿಯಲ್ಲಿನ ಪೊಲೀಸ್ ಪಬ್ಲಿಕ್ ಶಾಲೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.</p>.<p>ಅಮಿತ್ ಶಾ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಮುರುಗೇಶ ನಿರಾಣಿ, ಬೈರತಿ ಬಸವರಾಜ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು.</p>.<p><strong>ಅಗತ್ಯ ಸೌಲಭ್ಯಗಳ ಮನವಿ:</strong> ಭದ್ರತೆ ಕಾರಣದಿಂದ ಅಮಿತಾ ಶಾ ಕಾರ್ಯಕ್ರಮದಲ್ಲಿ ಕೆಲ ಬದಲಾವಣೆಯಾಗಿದೆ. ಕೊಂಡಜ್ಜಿ ಭಾಗದಲ್ಲಿ ಅರಣ್ಯ ಮತ್ತು ಕೆರೆ ಪ್ರದೇಶವಿದ್ದು, ಭದ್ರತೆ ಕಾರಣದಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.</p>.<p><strong>ಸ್ಥಳ ಪರಿಶೀಲನೆ:</strong> ಜಿಎಂಐಟಿ ಕ್ಯಾಂಪಸ್ ನಲ್ಲಿ ಅಮಿತ್ ಶಾ ಕಾರ್ಯಕ್ರಮದ ನಿಮಿತ್ತ ಎಡಿಜಿಪಿ ಎಂ.ಎಂ. ಸಲೀಂ,, ದಾವಣಗೆರೆ ಪೂರ್ವ ವಲಯ ಐಜಿಪಿ ರವಿ, ಎಸ್ಪಿ ಸಿ.ಬಿ. ರಿಷ್ಯಂತ್ ಸೇರಿದಂತೆ ಹಲವು ಅಧಿಕಾರಿಗಳು ವೇದಿಕೆಯನ್ನು ಪರಿಶೀಲಿಸಿದರು.</p>.<p><a href="https://www.prajavani.net/district/bellary/valmiki-community-anger-on-anand-singh-nephew-sandeep-singh-social-media-post-on-ramesh-jarkiholi-863160.html" itemprop="url">ರಮೇಶ ಜಾರಕಿಹೊಳಿ ಕುರಿತು ಆನಂದ್ ಸಿಂಗ್ ಅಳಿಯನ ಪೋಸ್ಟ್: ವಾಲ್ಮೀಕಿ ಸಮಾಜ ಆಕ್ರೋಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p>ಭದ್ರತೆ ಕಾರಣದಿಂದ ವಿವಿಧ ಸ್ಥಳಗಳಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ಸಂಸದ ಜಿ.ಎಂ. ಸಿದ್ದೇಶ್ವರ ಒಡೆತನದ ಜಿಎಂಐಟಿ ಕ್ಯಾಂಪಸ್ನಲ್ಲೇನಿಗದಿಪಡಿಸಲಾಗಿದೆ. ಮಧ್ಯಾಹ್ನ 3ಕ್ಕೆ ದಾವಣಗೆರೆಯ ಗಾಂಧಿ ಭವನ, ಕೊಂಡಜ್ಜಿಯಲ್ಲಿನ ಪೊಲೀಸ್ ಪಬ್ಲಿಕ್ ಶಾಲೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.</p>.<p>ಅಮಿತ್ ಶಾ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಮುರುಗೇಶ ನಿರಾಣಿ, ಬೈರತಿ ಬಸವರಾಜ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು.</p>.<p><strong>ಅಗತ್ಯ ಸೌಲಭ್ಯಗಳ ಮನವಿ:</strong> ಭದ್ರತೆ ಕಾರಣದಿಂದ ಅಮಿತಾ ಶಾ ಕಾರ್ಯಕ್ರಮದಲ್ಲಿ ಕೆಲ ಬದಲಾವಣೆಯಾಗಿದೆ. ಕೊಂಡಜ್ಜಿ ಭಾಗದಲ್ಲಿ ಅರಣ್ಯ ಮತ್ತು ಕೆರೆ ಪ್ರದೇಶವಿದ್ದು, ಭದ್ರತೆ ಕಾರಣದಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.</p>.<p><strong>ಸ್ಥಳ ಪರಿಶೀಲನೆ:</strong> ಜಿಎಂಐಟಿ ಕ್ಯಾಂಪಸ್ ನಲ್ಲಿ ಅಮಿತ್ ಶಾ ಕಾರ್ಯಕ್ರಮದ ನಿಮಿತ್ತ ಎಡಿಜಿಪಿ ಎಂ.ಎಂ. ಸಲೀಂ,, ದಾವಣಗೆರೆ ಪೂರ್ವ ವಲಯ ಐಜಿಪಿ ರವಿ, ಎಸ್ಪಿ ಸಿ.ಬಿ. ರಿಷ್ಯಂತ್ ಸೇರಿದಂತೆ ಹಲವು ಅಧಿಕಾರಿಗಳು ವೇದಿಕೆಯನ್ನು ಪರಿಶೀಲಿಸಿದರು.</p>.<p><a href="https://www.prajavani.net/district/bellary/valmiki-community-anger-on-anand-singh-nephew-sandeep-singh-social-media-post-on-ramesh-jarkiholi-863160.html" itemprop="url">ರಮೇಶ ಜಾರಕಿಹೊಳಿ ಕುರಿತು ಆನಂದ್ ಸಿಂಗ್ ಅಳಿಯನ ಪೋಸ್ಟ್: ವಾಲ್ಮೀಕಿ ಸಮಾಜ ಆಕ್ರೋಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>