<p><strong>ದಾವಣಗೆರೆ</strong>: ನಗರದ ಆಟೊ ಚಾಲಕರೊಬ್ಬರು ಆಟೊದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟಿದ್ದ7 ತೊಲ ಬಂಗಾರದ ಆಭರಣಗಳನ್ನು ಪತ್ತೆ ಮಾಡಲು ಪೊಲೀಸರಿಗೆ ನೆರವಾಗಿದ್ದಾರೆ.</p>.<p>ಇಲ್ಲಿನ ರಾಮಕೃಷ್ಣ ಹೆಗಡೆ ನಗರದ ಆಟೊ ಚಾಲಕ ಸುಭಾನ್ ಖಲೀಲ್ ಸಾಬ್ ಆಭರಣ ಹುಡುಕಲು ಪೊಲೀಸರಿಗೆ ನೆರವಾದವರು.</p>.<p>ಚಿತ್ರದುರ್ಗದ ಹಿಮ್ಮತ್ ನಗರದ ಅಶ್ಮತ್ ಉನ್ನೀಸಾ ಅವರುಭಾನುವಾರ ನಗರದ ಸುಲ್ತಾನ್ ಪ್ಯಾಲೇಸ್ ಕಲ್ಯಾಣ ಮಂದಿರದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಬಂದಿದ್ದರು.ಆಟೊದಿಂದ ಇಳಿಯುವಾಗ ಬಂಗಾರದ ಎರಡು ನೆಕ್ಲೆಸ್, ಕಿವಿಯ ಹ್ಯಾಂಗಿಂಗ್ಸ್ ಸೇರಿದಂತೆ 7 ತೊಲದ ₹ 3.50 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಇದ್ದ ತಮ್ಮ ವ್ಯಾನಿಟಿ ಬ್ಯಾಗ್ ಅನ್ನು ಮರೆತು ಬಿಟ್ಟಿದ್ದರು.</p>.<p>ಬಳಿಕ ಬಂದು ಆಟೊವನ್ನು ಹುಡುಕಿದಾಗ ಅದರಲ್ಲಿ ವ್ಯಾನಿಟಿ ಬ್ಯಾಗ್ ಇರಲಿಲ್ಲ. ಮತ್ತೊಬ್ಬ ಪ್ರಯಾಣಿಕರು ಬ್ಯಾಗ್ ತೆಗೆದುಕೊಂಡು ಹೋಗಿದ್ದರು. ಬಳಿಕಅಶ್ಮತ್ ಉನ್ನೀಸಾ ಅವರೊಂದಿಗೆ ತೆರಳಿದ ಸುಭಾನ್ ಆಜಾದ್ ನಗರ ಪೊಲೀಸರಿಗೆ ದೂರು ನೀಡಿದ್ದರು.</p>.<p>ಆಟೊ ಚಾಲಕಸುಭಾನ್ ಸಾಬ್ ಬೆಳಿಗ್ಗೆಯಿಂದ ಸಂಜೆಯವರೆಗೆ ಆಟೊದಲ್ಲಿ ಪ್ರಯಾಣಿಸಿದ ಎಲ್ಲ ಪ್ರಯಾಣಿಕರನ್ನು ಹುಡುಕಿಕೊಂಡು ಹೋಗಿ ಕೊನೆಯಲ್ಲಿ ಬ್ಯಾಗ್ ತೆಗೆದುಕೊಂಡು ಹೋದ ಪ್ರಯಾಣಿಕರಿಂದ ವಾಪಸ್ ಪಡೆದರು.ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಪಿಎಸ್ಐ ತಿಪ್ಪೇಸ್ವಾಮಿ ಆಟೊ ಚಾಲಕ ಸುಭಾನ್ ಸಾಬ್ ಅವರನ್ನು ಸನ್ಮಾನಿಸಿದರು.</p>.<p>ಆಭರಣದಲ್ಲಿ ಪತ್ತೆ ಕಾರ್ಯದಲ್ಲಿ ಆಜಾದ್ ನಗರ ಪಿಎಸ್ಐ ತಿಪ್ಪೇಸ್ವಾಮಿ, ಸಿಬ್ಬಂದಿ ಅಕ್ಬರ್ ಮುಲ್ಲಾ, ಜಗನ್ನಾಥ್ ಸಿಂಗ್, ಹನುಮಂತಪ್ಪ ಮಡ್ಡಿ, ಪ್ರದೀಪ್ ಕುಮಾರ್ ಭಾಗವಹಿಸಿದ್ದರು. ಆಟೊ ಚಾಲಕ ಹಾಗೂ ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಪ್ರಶಂಸಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರದ ಆಟೊ ಚಾಲಕರೊಬ್ಬರು ಆಟೊದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟಿದ್ದ7 ತೊಲ ಬಂಗಾರದ ಆಭರಣಗಳನ್ನು ಪತ್ತೆ ಮಾಡಲು ಪೊಲೀಸರಿಗೆ ನೆರವಾಗಿದ್ದಾರೆ.</p>.<p>ಇಲ್ಲಿನ ರಾಮಕೃಷ್ಣ ಹೆಗಡೆ ನಗರದ ಆಟೊ ಚಾಲಕ ಸುಭಾನ್ ಖಲೀಲ್ ಸಾಬ್ ಆಭರಣ ಹುಡುಕಲು ಪೊಲೀಸರಿಗೆ ನೆರವಾದವರು.</p>.<p>ಚಿತ್ರದುರ್ಗದ ಹಿಮ್ಮತ್ ನಗರದ ಅಶ್ಮತ್ ಉನ್ನೀಸಾ ಅವರುಭಾನುವಾರ ನಗರದ ಸುಲ್ತಾನ್ ಪ್ಯಾಲೇಸ್ ಕಲ್ಯಾಣ ಮಂದಿರದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಬಂದಿದ್ದರು.ಆಟೊದಿಂದ ಇಳಿಯುವಾಗ ಬಂಗಾರದ ಎರಡು ನೆಕ್ಲೆಸ್, ಕಿವಿಯ ಹ್ಯಾಂಗಿಂಗ್ಸ್ ಸೇರಿದಂತೆ 7 ತೊಲದ ₹ 3.50 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಇದ್ದ ತಮ್ಮ ವ್ಯಾನಿಟಿ ಬ್ಯಾಗ್ ಅನ್ನು ಮರೆತು ಬಿಟ್ಟಿದ್ದರು.</p>.<p>ಬಳಿಕ ಬಂದು ಆಟೊವನ್ನು ಹುಡುಕಿದಾಗ ಅದರಲ್ಲಿ ವ್ಯಾನಿಟಿ ಬ್ಯಾಗ್ ಇರಲಿಲ್ಲ. ಮತ್ತೊಬ್ಬ ಪ್ರಯಾಣಿಕರು ಬ್ಯಾಗ್ ತೆಗೆದುಕೊಂಡು ಹೋಗಿದ್ದರು. ಬಳಿಕಅಶ್ಮತ್ ಉನ್ನೀಸಾ ಅವರೊಂದಿಗೆ ತೆರಳಿದ ಸುಭಾನ್ ಆಜಾದ್ ನಗರ ಪೊಲೀಸರಿಗೆ ದೂರು ನೀಡಿದ್ದರು.</p>.<p>ಆಟೊ ಚಾಲಕಸುಭಾನ್ ಸಾಬ್ ಬೆಳಿಗ್ಗೆಯಿಂದ ಸಂಜೆಯವರೆಗೆ ಆಟೊದಲ್ಲಿ ಪ್ರಯಾಣಿಸಿದ ಎಲ್ಲ ಪ್ರಯಾಣಿಕರನ್ನು ಹುಡುಕಿಕೊಂಡು ಹೋಗಿ ಕೊನೆಯಲ್ಲಿ ಬ್ಯಾಗ್ ತೆಗೆದುಕೊಂಡು ಹೋದ ಪ್ರಯಾಣಿಕರಿಂದ ವಾಪಸ್ ಪಡೆದರು.ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಪಿಎಸ್ಐ ತಿಪ್ಪೇಸ್ವಾಮಿ ಆಟೊ ಚಾಲಕ ಸುಭಾನ್ ಸಾಬ್ ಅವರನ್ನು ಸನ್ಮಾನಿಸಿದರು.</p>.<p>ಆಭರಣದಲ್ಲಿ ಪತ್ತೆ ಕಾರ್ಯದಲ್ಲಿ ಆಜಾದ್ ನಗರ ಪಿಎಸ್ಐ ತಿಪ್ಪೇಸ್ವಾಮಿ, ಸಿಬ್ಬಂದಿ ಅಕ್ಬರ್ ಮುಲ್ಲಾ, ಜಗನ್ನಾಥ್ ಸಿಂಗ್, ಹನುಮಂತಪ್ಪ ಮಡ್ಡಿ, ಪ್ರದೀಪ್ ಕುಮಾರ್ ಭಾಗವಹಿಸಿದ್ದರು. ಆಟೊ ಚಾಲಕ ಹಾಗೂ ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಪ್ರಶಂಸಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>