ಬಿಐಇಟಿ ಕಾಲೇಜಿನ ಪ್ರಾಧ್ಯಾಪಕ ಡಾ.ಬಿ.ಇ. ರಂಗಸ್ವಾಮಿ, ‘ಕುತೂಹಲ ಇದ್ದರೆ ಏನನ್ನಾದರೂ ಸಾಧಿಸಬಹುದು. ಆಸಕ್ತಿ ಕಳೆದುಹೋಗದಂತೆ ನೋಡಿಕೊಳ್ಳಿ. ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡರೆ ದೇಶ ಸೂಪರ್ ಪವರ್ ಆಗಲು ಸಾಧ್ಯ. ಜೀವನದಲ್ಲಿ ಸೃಜನಶೀಲತೆ, ಕುತೂಹಲ ಮುಖ್ಯ. ಸಂವಹನ ಕೌಶಲ, ನಾಯಕತ್ವ ಗುಣ ಬೆಳೆಸಿಕೊಳ್ಳಿ’ ಎಂದು ಕಿವಿಮಾತು ಹೇಳಿದರು.