<p><strong>ದಾವಣಗೆರೆ</strong>: ‘ಬಾಬಾ ಸಾಹೇಬ್ ಅಂಬೇಡ್ಕರ್ ಬಂದರೂ ಸಂವಿಧಾನವನ್ನು ಬದಲಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರ ಹೇಳಿಕೆಯು ಚುನಾವಣಾ ಕುತಂತ್ರದಿಂದ ಕೂಡಿದೆ’ ಎಂದು ಕಾಂಗ್ರೆಸ್ ಮುಖಂಡ ಅನೀಸ್ ಪಾಷಾ ದೂರಿದ್ದಾರೆ.</p>.<p>‘2018ರಲ್ಲಿ ಮನುವಾದಿ ಸಂಘಟನೆಯವರು ಸಂವಿಧಾನದ ಪ್ರತಿಗಳನ್ನು ಸುಟ್ಟು, ಅಂಬೇಡ್ಕರ್ ವಿರುದ್ಧ ಘೋಷಣೆ ಕೂಗಿದ್ದರು. ಆ ಸಂದರ್ಭದಲ್ಲಿ ಪ್ರಧಾನಮಂತ್ರಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಲಿಲ್ಲ. ಆರೋಪಿಗಳ ವಿರುದ್ಧ ಕ್ರಮ ವಹಿಸಲಿಲ್ಲ. ಬಿಜೆಪಿ ಸಂಸದರು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನು ಬದಲಿಸಲು ಎಂದು ಬಹಿರಂಗ ಹೇಳಿಕೆ ನೀಡಿದಾಗಲೂ, ಪ್ರಧಾನಿ ವಿರೋಧಿಸಲಿಲ್ಲ’ ಎಂದು ಹೇಳಿದ್ದಾರೆ.</p>.<p>‘ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ದೇಶಾದ್ಯಂತ 272 ಸಂಸದರು ಗೆದ್ದರೆ ಸಾಕು. ಆದರೆ, ಪ್ರಧಾನಿ ಮೋದಿ 400 ಸಂಸದರನ್ನು ಗೆಲ್ಲಿಸಿ ಎಂದು ಪದೇ ಪದೇ ಹೇಳುತ್ತಿರುವುದು ಅನುಮಾನ ಮೂಡಿಸುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಮುಸ್ಲಿಂ ಲೀಗ್ ಚಿಂತನೆಯನ್ನು ಹೊಂದಿದೆ ಎಂದು ಚುನಾವಣಾ ಸಂದರ್ಭದಲ್ಲಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತೆ. ಒಂದು ಸಮುದಾಯದ ಕಡೆಗೆ ಬೆರಳು ಮಾಡಿ ಮಾತಾಡಲು ಯಾರಿಗೂ ಅವಕಾಶ ಇಲ್ಲ. ಪ್ರಧಾನಿ ಘನತೆವೆತ್ತ ಸ್ಥಾನದಲ್ಲಿದ್ದು, ಈ ರೀತಿಯ ಹೇಳಿಕೆ ನೀಡುತ್ತಿರುವುದು ಜನರ ದಾರಿ ತಪ್ಪಿಸುವ ಕೆಲಸವಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಬಾಬಾ ಸಾಹೇಬ್ ಅಂಬೇಡ್ಕರ್ ಬಂದರೂ ಸಂವಿಧಾನವನ್ನು ಬದಲಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರ ಹೇಳಿಕೆಯು ಚುನಾವಣಾ ಕುತಂತ್ರದಿಂದ ಕೂಡಿದೆ’ ಎಂದು ಕಾಂಗ್ರೆಸ್ ಮುಖಂಡ ಅನೀಸ್ ಪಾಷಾ ದೂರಿದ್ದಾರೆ.</p>.<p>‘2018ರಲ್ಲಿ ಮನುವಾದಿ ಸಂಘಟನೆಯವರು ಸಂವಿಧಾನದ ಪ್ರತಿಗಳನ್ನು ಸುಟ್ಟು, ಅಂಬೇಡ್ಕರ್ ವಿರುದ್ಧ ಘೋಷಣೆ ಕೂಗಿದ್ದರು. ಆ ಸಂದರ್ಭದಲ್ಲಿ ಪ್ರಧಾನಮಂತ್ರಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಲಿಲ್ಲ. ಆರೋಪಿಗಳ ವಿರುದ್ಧ ಕ್ರಮ ವಹಿಸಲಿಲ್ಲ. ಬಿಜೆಪಿ ಸಂಸದರು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನು ಬದಲಿಸಲು ಎಂದು ಬಹಿರಂಗ ಹೇಳಿಕೆ ನೀಡಿದಾಗಲೂ, ಪ್ರಧಾನಿ ವಿರೋಧಿಸಲಿಲ್ಲ’ ಎಂದು ಹೇಳಿದ್ದಾರೆ.</p>.<p>‘ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ದೇಶಾದ್ಯಂತ 272 ಸಂಸದರು ಗೆದ್ದರೆ ಸಾಕು. ಆದರೆ, ಪ್ರಧಾನಿ ಮೋದಿ 400 ಸಂಸದರನ್ನು ಗೆಲ್ಲಿಸಿ ಎಂದು ಪದೇ ಪದೇ ಹೇಳುತ್ತಿರುವುದು ಅನುಮಾನ ಮೂಡಿಸುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಮುಸ್ಲಿಂ ಲೀಗ್ ಚಿಂತನೆಯನ್ನು ಹೊಂದಿದೆ ಎಂದು ಚುನಾವಣಾ ಸಂದರ್ಭದಲ್ಲಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತೆ. ಒಂದು ಸಮುದಾಯದ ಕಡೆಗೆ ಬೆರಳು ಮಾಡಿ ಮಾತಾಡಲು ಯಾರಿಗೂ ಅವಕಾಶ ಇಲ್ಲ. ಪ್ರಧಾನಿ ಘನತೆವೆತ್ತ ಸ್ಥಾನದಲ್ಲಿದ್ದು, ಈ ರೀತಿಯ ಹೇಳಿಕೆ ನೀಡುತ್ತಿರುವುದು ಜನರ ದಾರಿ ತಪ್ಪಿಸುವ ಕೆಲಸವಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>