ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23ರಂದು ಅಂಗನವಾಡಿ ನೌಕರರ ಬೆಂಗಳೂರು ಚಲೋ

Last Updated 19 ಜನವರಿ 2020, 10:44 IST
ಅಕ್ಷರ ಗಾತ್ರ

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರಿಂದ ಜ.23, 24ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ರಾಜ್ಯಾಧ್ಯಕ್ಷ ಎಚ್‌.ಕೆ. ರಾಮಚಂದ್ರಪ್ಪ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಹೊರಟು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಯಲಿದೆ. ಎರಡು ದಿನಗಳು ಅಹೋರಾತ್ರಿ ಧರಣಿ ನಡೆಯಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ರಾಜ್ಯದಲ್ಲಿ 1.30 ಲಕ್ಷ , ಜಿಲ್ಲೆಯಲ್ಲಿ 3446 ಜನನೌಕರರು ಇದ್ದಾರೆ. ಮೂರು ತಿಂಗಳಿನಿಂದ ವೇತನ, ಮೊಟ್ಟೆ ಪೂರೈಕೆಯ ಹಣ ನೀಡಿಲ್ಲ. ಇದರಿಂದ ನೌಕರರ ಜೀವನ ನಿರ್ವಹಣೆ ಕಷ್ಟವಾಗಿದೆ. 45 ವರ್ಷಗಳಿಂದ ಗೌರವಧನದ ಆಧಾರದಲ್ಲಿ ದುಡಿಯುತ್ತಿದ್ದು, ಕಾಯಂ ಕಾರ್ಮಿಕರೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರಗಳಲ್ಲೇ ಕಾನ್ವೆಂಟ್‌ ತೆರೆಯಬೇಕು. ನಿವೃತ್ತಿಯಾದವರಿಗೆ ಕನಿಷ್ಠ ₹ 5 ಸಾವಿರ ಪಿಂಚಣಿ ನೀಡಬೇಕು. ಸೇವಾ ಹಿರಿತನದ ಮೇಲೆ ಗೌರವಧನ ಹೆಚ್ಚಳ ಮಾಡಬೇಕು. ತೀವ್ರ ಕಾಯಿಲೆ ಬಿದ್ದಾಗ ಉಚಿತ ಚಿಕಿತ್ಸೆ, ವೇತನ ಸಹಿತ ರಜೆ ನೀಡಬೇಕು. ₹ 21 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಇಎಸ್‌ಐ, ಭವಿಷ್ಯ ನಿಧಿ, ಗ್ರ್ಯಾಚುಟಿ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ವಿವರಿಸಿದರು.

ಧರಣಿಯಲ್ಲಿ ಪಾಲ್ಗೊಳ್ಳುವವರು ಊಟ ವ್ಯವಸ್ಥೆ ಮಾಡಿಕೊಂಡು ಬರಬೇಕು ಎಂದು ಮನವಿ ಮಾಡಿದರು.

ಫೆಡರೇಷನ್‌ನ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಬಿ. ಶಾರದಮ್ಮ, ವಿಶಾಲಾಕ್ಷಿ, ಎಸ್‌.ಎಸ್. ಮಲ್ಲಮ್ಮ, ರೇಣುಕಮ್ಮ, ಸುಧಾ, ಸಿ.ಟಿ. ಕಾಳಮ್ಮ, ಆವರಗೆರೆ ವಾಸು, ಆವರಗೆರೆ ಚಂದ್ರು, ಎನ್‌.ಎಚ್‌. ರಾಮಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT