ಮಂಗಳವಾದ್ಯಗಳೊಂದಿಗೆ ಆಂಜನೇಯಸ್ವಾಮಿಯ ಉತ್ಸವಮೂರ್ತಿ ಗ್ರಾಮ ಪ್ರದಕ್ಷಿಣೆ ನಡೆಯಿತು. ನಂತರ ಜಿಗಳಿ ರಂಗನಾಥಸ್ವಾಮಿ ಉತ್ಸವಮೂರ್ತಿಯೊಂದಿಗೆ ರಥಾರೋಹಣ ಮಾಡಲಾಯಿತು. ಬಲಿದಾನ ಹಾಗೂ ಹೂಮಾಲೆ, ಧ್ಜಜ ಪತಾಕೆ ಹರಾಜು ಮಾಡಿದ ನಂತರ ಭಕ್ತರು ರಥದ ಗಾಲಿಗೆ ತೆಂಗಿನಕಾಯಿ ಒಡೆದು, ಕಳಸಕ್ಕೆ ಬಾಳೆಹಣ್ಣು ಸಮರ್ಪಿಸಿದರು. ‘ರಾಮ ರಾಮ ಗೋವಿಂದ’ ಎನ್ನುತ್ತಾ ಭಕ್ತರು ರಥ ಎಳೆದರು. ಡೊಳ್ಳು, ನಾಸಿಕ್ ಡೋಲು, ತಮಟೆ ಮೇಳ, ಉತ್ಸವಕ್ಕೆ ಕಳೆ ತಂದವು.