<p><strong>ಡಿ.ಕೆ. ಬಸವರಾಜು</strong></p>.<p><strong>ದಾವಣಗೆರೆ</strong>: ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವ ಜಿಲ್ಲೆಯ 3.33 ಲಕ್ಷ ಕುಟುಂಬಗಳ ಖಾತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಯಡಿ ನೇರವಾಗಿ ಹಣ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಸುಮಾರು 11.37 ಲಕ್ಷ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿದ್ದಾರೆ.</p>.<p>ಜಿಲ್ಲೆಯ ಆಹಾರ ನಾಗರಿಕ ಸರಬರಾಜು ಇಲಾಖೆಯ ಖಾತೆಗೆ ₹ 21 ಕೋಟಿ ಬಂದಿದ್ದು, ಇಂದಿನಿಂದಲೇ ಬಿಲ್ ಮಾಡಿ ಅದನ್ನು ನಾನು ಮತ್ತು ಜಿಲ್ಲಾಧಿಕಾರಿಗಳು ಸಹಿಯಾದ ಬಳಿಕ ಅದನ್ನು ಖಜಾನೆಗೆ ಕಳುಹಿಸಲಾಗುವುದು. ಖಜಾನೆಯಿಂದ 3ರಿಂದ 4 ದಿನಗಳ ಅವಧಿಯಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ’ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಸಿದ್ಧರಾಮ ಮಾರಿಹಾಳ ತಿಳಿಸಿದರು.</p>.<p>‘ಬಿಪಿಎಲ್ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಲಾಗಿದ್ದ 5 ಕೆ.ಜಿ ಅಕ್ಕಿಯ ಬದಲಾಗಿ ಪಡಿತರ ಚೀಟಿ ಕುಟುಂಬದಲ್ಲಿನ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿಗೆ ₹ 34x5ರಂತೆ ₹ 170 ಸಿಗಲಿದೆ. ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಪಡಿತರ ಕುಟುಂಬದ ಮುಖ್ಯಸ್ಥರ ಖಾತೆ ಸೇರುತ್ತದೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಫಲಾನುಭವಿಗಳ ಹಣ ನೀಡಲು ಆರಂಭಿಸುತ್ತೇವೆ. ಪಡಿತರ ಚೀಟಿಗೆ ಬ್ಯಾಂಕ್ ಖಾತೆ ಜೋಡಣೆ ಮಾಡದೇ ಇರುವವರ ಮಾಹಿತಿ ಸಂಗ್ರಹಿಸಿ ಅಪ್ಡೇಟ್ ಮಾಡುತ್ತೇವೆ. ಇದೇ ತಿಂಗಳಲ್ಲಿ ಎಲ್ಲರ ಖಾತೆಗೆ ಹಣ ಹಾಕುತ್ತೇವೆ’ ಎಂದು ತಿಳಿಸಿದರು.</p>.<p>‘ಅಂತ್ಯೋದಯ ಅನ್ನ ಯೋಜನೆಯಡಿ (ಎಎವೈ) ಪಡಿತರ ಚೀಟಿ ಹೊಂದಿರುವ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಕ್ಕೆ ಈಗಾಗಲೇ 21 ಕೆ.ಜಿ ಅಕ್ಕಿ, 14 ಕೆ.ಜಿ ರಾಗಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಹೀಗಾಗಿ, ಈ ಕುಟುಂಬಕ್ಕೆ ನಗದು ವರ್ಗಾವಣೆಯ ಸೌಲಭ್ಯ ಸಿಗುವುದಿಲ್ಲ. ಒಂದು ವೇಳೆ ಆ ಕುಟುಂಬದಲ್ಲಿ 4 ಸದಸ್ಯರು ಇದ್ದರೆ ಆ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಕಳೆದು ಉಳಿದ 5 ಕೆ.ಜಿಗೆ ₹ 170 ಸಿಗಲಿದೆ. ಹೆಚ್ಚುವರಿ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಹಣ ಹಾಕಲಾಗುವುದು’ ಎಂದು ಅವರು ತಿಳಿಸಿದರು.</p>.<p>ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ‘ಅನ್ನಭಾಗ್ಯ’ದಡಿ ತಲಾ 10 ಅಕ್ಕಿ ವಿತರಿಸುವ ಯೋಜನೆಗೆ, ಅಕ್ಕಿ ಹೊಂದಿಸಲು ಸಾಧ್ಯವಾಗದೇ ಇರುವುದರಿಂದ ತಲಾ 5 ಕೆ.ಜಿ ಅಕ್ಕಿ ಹಾಗೂ ಬಾಕಿ 5 ಕೆ.ಜಿ ಅಕ್ಕಿ ಬದಲು ₹ 170 ಅನ್ನು ಫಲಾನುಭವಿ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>=========</p>.<p>ಜಿಲ್ಲೆಯಲ್ಲಿರುವ ಪಡಿತರ ಚೀಟಿದಾರರ ಸಂಖ್ಯೆ</p>.<p>* ಅಂತ್ಯೋದಯ ಅನ್ನ ಪಡಿತರ (ಎಎವೈ) ಚೀಟಿ: 45,723<br />* ಅಂತ್ಯೋದಯ ಅನ್ನ ಪಡಿತರ ಚೀಟಿಯಲ್ಲಿರುವ ಸದಸ್ಯರು: 1,94,414<br />* ಬಿಪಿಎಲ್ ಪಡಿತರ ಚೀಟಿ: 3,33,041<br />* ಬಿಪಿಎಲ್ ಪಡಿತರ ಚೀಟಿಯಲ್ಲಿರುವ ಸದಸ್ಯರು: 11,37,151<br />* ಎಎವೈ+ಬಿಪಿಎಲ್ ಸೇರಿ ಒಟ್ಟು ಚೀಟಿ: 3,78,764<br />* ಎಎವೈ+ಬಿಪಿಎಲ್ ಸೇರಿ ಚೀಟಿಯಲ್ಲಿರುವ ಒಟ್ಟು ಸದಸ್ಯರು: 13,31,565</p>.<p>*ಫಲಾನುಭವಿಗಳಿಗೆ ನೀಡಲು ಇರುವ ಮೊತ್ತ: ₹21 ಕೋಟಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡಿ.ಕೆ. ಬಸವರಾಜು</strong></p>.<p><strong>ದಾವಣಗೆರೆ</strong>: ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವ ಜಿಲ್ಲೆಯ 3.33 ಲಕ್ಷ ಕುಟುಂಬಗಳ ಖಾತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಯಡಿ ನೇರವಾಗಿ ಹಣ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಸುಮಾರು 11.37 ಲಕ್ಷ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿದ್ದಾರೆ.</p>.<p>ಜಿಲ್ಲೆಯ ಆಹಾರ ನಾಗರಿಕ ಸರಬರಾಜು ಇಲಾಖೆಯ ಖಾತೆಗೆ ₹ 21 ಕೋಟಿ ಬಂದಿದ್ದು, ಇಂದಿನಿಂದಲೇ ಬಿಲ್ ಮಾಡಿ ಅದನ್ನು ನಾನು ಮತ್ತು ಜಿಲ್ಲಾಧಿಕಾರಿಗಳು ಸಹಿಯಾದ ಬಳಿಕ ಅದನ್ನು ಖಜಾನೆಗೆ ಕಳುಹಿಸಲಾಗುವುದು. ಖಜಾನೆಯಿಂದ 3ರಿಂದ 4 ದಿನಗಳ ಅವಧಿಯಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ’ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಸಿದ್ಧರಾಮ ಮಾರಿಹಾಳ ತಿಳಿಸಿದರು.</p>.<p>‘ಬಿಪಿಎಲ್ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಲಾಗಿದ್ದ 5 ಕೆ.ಜಿ ಅಕ್ಕಿಯ ಬದಲಾಗಿ ಪಡಿತರ ಚೀಟಿ ಕುಟುಂಬದಲ್ಲಿನ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿಗೆ ₹ 34x5ರಂತೆ ₹ 170 ಸಿಗಲಿದೆ. ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಪಡಿತರ ಕುಟುಂಬದ ಮುಖ್ಯಸ್ಥರ ಖಾತೆ ಸೇರುತ್ತದೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಫಲಾನುಭವಿಗಳ ಹಣ ನೀಡಲು ಆರಂಭಿಸುತ್ತೇವೆ. ಪಡಿತರ ಚೀಟಿಗೆ ಬ್ಯಾಂಕ್ ಖಾತೆ ಜೋಡಣೆ ಮಾಡದೇ ಇರುವವರ ಮಾಹಿತಿ ಸಂಗ್ರಹಿಸಿ ಅಪ್ಡೇಟ್ ಮಾಡುತ್ತೇವೆ. ಇದೇ ತಿಂಗಳಲ್ಲಿ ಎಲ್ಲರ ಖಾತೆಗೆ ಹಣ ಹಾಕುತ್ತೇವೆ’ ಎಂದು ತಿಳಿಸಿದರು.</p>.<p>‘ಅಂತ್ಯೋದಯ ಅನ್ನ ಯೋಜನೆಯಡಿ (ಎಎವೈ) ಪಡಿತರ ಚೀಟಿ ಹೊಂದಿರುವ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಕ್ಕೆ ಈಗಾಗಲೇ 21 ಕೆ.ಜಿ ಅಕ್ಕಿ, 14 ಕೆ.ಜಿ ರಾಗಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಹೀಗಾಗಿ, ಈ ಕುಟುಂಬಕ್ಕೆ ನಗದು ವರ್ಗಾವಣೆಯ ಸೌಲಭ್ಯ ಸಿಗುವುದಿಲ್ಲ. ಒಂದು ವೇಳೆ ಆ ಕುಟುಂಬದಲ್ಲಿ 4 ಸದಸ್ಯರು ಇದ್ದರೆ ಆ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಕಳೆದು ಉಳಿದ 5 ಕೆ.ಜಿಗೆ ₹ 170 ಸಿಗಲಿದೆ. ಹೆಚ್ಚುವರಿ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಹಣ ಹಾಕಲಾಗುವುದು’ ಎಂದು ಅವರು ತಿಳಿಸಿದರು.</p>.<p>ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ‘ಅನ್ನಭಾಗ್ಯ’ದಡಿ ತಲಾ 10 ಅಕ್ಕಿ ವಿತರಿಸುವ ಯೋಜನೆಗೆ, ಅಕ್ಕಿ ಹೊಂದಿಸಲು ಸಾಧ್ಯವಾಗದೇ ಇರುವುದರಿಂದ ತಲಾ 5 ಕೆ.ಜಿ ಅಕ್ಕಿ ಹಾಗೂ ಬಾಕಿ 5 ಕೆ.ಜಿ ಅಕ್ಕಿ ಬದಲು ₹ 170 ಅನ್ನು ಫಲಾನುಭವಿ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>=========</p>.<p>ಜಿಲ್ಲೆಯಲ್ಲಿರುವ ಪಡಿತರ ಚೀಟಿದಾರರ ಸಂಖ್ಯೆ</p>.<p>* ಅಂತ್ಯೋದಯ ಅನ್ನ ಪಡಿತರ (ಎಎವೈ) ಚೀಟಿ: 45,723<br />* ಅಂತ್ಯೋದಯ ಅನ್ನ ಪಡಿತರ ಚೀಟಿಯಲ್ಲಿರುವ ಸದಸ್ಯರು: 1,94,414<br />* ಬಿಪಿಎಲ್ ಪಡಿತರ ಚೀಟಿ: 3,33,041<br />* ಬಿಪಿಎಲ್ ಪಡಿತರ ಚೀಟಿಯಲ್ಲಿರುವ ಸದಸ್ಯರು: 11,37,151<br />* ಎಎವೈ+ಬಿಪಿಎಲ್ ಸೇರಿ ಒಟ್ಟು ಚೀಟಿ: 3,78,764<br />* ಎಎವೈ+ಬಿಪಿಎಲ್ ಸೇರಿ ಚೀಟಿಯಲ್ಲಿರುವ ಒಟ್ಟು ಸದಸ್ಯರು: 13,31,565</p>.<p>*ಫಲಾನುಭವಿಗಳಿಗೆ ನೀಡಲು ಇರುವ ಮೊತ್ತ: ₹21 ಕೋಟಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>