ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೂ ರಾಮಮಂದಿರ ಬೇಕು. ಆದರೆ ಅದಕ್ಕೆ ಒತ್ತು ನೀಡಿದರೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಕಡೆಗೆ, ರೈತರ ಬಗ್ಗೆ ಚಿಂತನೆ ನಡೆಸಿ ಮಂತ್ರಗಳನ್ನು ಹೇಳಬೇಕಿತ್ತು. ಕೇವಲ ಅಧ್ಯಾತ್ಮದ ಕಡೆಗೆ ಗಮನ ಹರಿಸಲಾಗುತ್ತಿದೆ. ದೇಶದಲ್ಲಿ ರಾಮ ಮಂದಿರದ ಜೊತೆಗೆ ಕೈಗಾರಿಕೆಗಳು ಸ್ಥಾಪನೆ ಆಗಬೇಕು. ನಾವು ಕೂಡಾ ರಾಮನ ಭಕ್ತರು. ಆದರೆ, ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು’ ಎಂದು ಸುದ್ದಿಗಾರರಿಗೆ ತಿಳಿಸಿದರು.