‘ಒಮ್ಮೆ ಅಣೆಕಟ್ಟೆಯಲ್ಲಿ ಬಿರುಕು ಮೂಡಿ ಡ್ರಿಪ್ ಯೋಜನೆ ಅಡಿ ದುರಸ್ತಿ ಮಾಡಲಾಗಿದೆ. ಒಂದು ಪಾರ್ಶ್ವದ ಗೋಡೆಯಲ್ಲಿ ಚಿಕ್ಕ ಬಿರುಕು ಕಾಣಿಸಿಕೊಂಡಿದೆ. ನೀರಿನ ಒತ್ತಡದಿಂದಾಗಿ ಒಂದು ವೇಳೆ ಅಣೆಕಟ್ಟೆಗೆ ಹಾನಿಯಾದರೆ ಯಾರು ಹೊಣೆ’ ಎಂದು ಸಂಕ್ಲೀಪುರ, ಗುಳದಳ್ಳಿ, ಬೂದಿಹಾಳ್, ದೇವರಬೆಳಕೆರೆ, ಗ್ರಾಮದ ರೈತರು ಆತಂಕ ವ್ಯಕ್ತಪಡಿಸಿದರು.