ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಒಂದು ವಾರದ ಹಿಂದೆ ಗ್ರಾಮದ ಆಂಜನೇಯ ಎಂಬುವವರ ಅಡಿಕೆ ತೋಟದಲ್ಲಿ ಕಳವು ಮಾಡಿದ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಲಾಗಿದೆ. ಆರೋಪಿ ಪರಮೇಶ್ವರಪ್ಪ ಎಂಬುವವರ ಬಂಧನಕ್ಕೆ ಬಲೆ ಬೀಸಿದ್ದು, ಶೀಘ್ರಆತನನ್ನು ಪತ್ತೆ ಹಚ್ಚಲಾಗುವುದು ಎಂದು ಸಿಪಿಐ ದೇವರಾಜ್ ತಿಳಿಸಿದ್ದಾರೆ.
ಬಂಧಿತರಿಂದ 8 ಕ್ವಿಂಟಲ್ ಅಡಿಕೆ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಾಲ್ಲೂಕಿನ ಕುಂದೂರು, ಮಲೇಕುಂಬಳೂರು ಹಾಗೂ ನೆಲಹೊನ್ನೆ ಗ್ರಾಮದವರಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಪಿಐ ತಿಳಿಸಿದ್ದಾರೆ.