ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಿಕೆ ಕಳವು: 8 ಜನರ ಬಂಧನ

Last Updated 6 ಡಿಸೆಂಬರ್ 2021, 4:40 IST
ಅಕ್ಷರ ಗಾತ್ರ

ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಒಂದು ವಾರದ ಹಿಂದೆ ಗ್ರಾಮದ ಆಂಜನೇಯ ಎಂಬುವವರ ಅಡಿಕೆ ತೋಟದಲ್ಲಿ ಕಳವು ಮಾಡಿದ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಲಾಗಿದೆ. ಆರೋಪಿ ಪರಮೇಶ್ವರಪ್ಪ ಎಂಬುವವರ ಬಂಧನಕ್ಕೆ ಬಲೆ ಬೀಸಿದ್ದು, ಶೀಘ್ರಆತನನ್ನು ಪತ್ತೆ ಹಚ್ಚಲಾಗುವುದು ಎಂದು ಸಿಪಿಐ ದೇವರಾಜ್ ತಿಳಿಸಿದ್ದಾರೆ.

ಬಂಧಿತರಿಂದ 8 ಕ್ವಿಂಟಲ್ ಅಡಿಕೆ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಾಲ್ಲೂಕಿನ ಕುಂದೂರು, ಮಲೇಕುಂಬಳೂರು ಹಾಗೂ ನೆಲಹೊನ್ನೆ ಗ್ರಾಮದವರಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಪಿಐ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT