ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಆರ್‌ಎಸ್‌ಐ ಸಾವು

Last Updated 12 ಆಗಸ್ಟ್ 2020, 9:10 IST
ಅಕ್ಷರ ಗಾತ್ರ

ದಾವಣಗೆರೆ: ಅಸ್ತಮಾದಿಂದ ಬಳಲುತ್ತಿದ್ದ ಡಿಎಆರ್‌ನ ಎಆರ್‌ಎಸ್ಐ (ಅಸಿಸ್ಟೆಂಟ್‌ ಆರ್ಮ್ಡ್ ಸಬ್‌ ಇನ್‌ಸ್ಪೆಕ್ಟರ್‌) ಎ. ಪರಶುರಾಮ (48) ಉಸಿರಾಟದ ಸಮಸ್ಯೆಯಿಂದ ಮಂಗಳವಾರ ಬಾಪೂಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹರಪನಹಳ್ಳಿ ತಾಲ್ಲೂಕಿನ ಓಬನಹಳ್ಳಿ ಅವರು ಈಚೆಗೆ ಆಸ್ತಮಾದಿಂದ ಬಳಲುತ್ತಿದ್ದರು. ಹಾಗಾಗಿ ರಜೆಯಲ್ಲಿದ್ದರು. ಸೋಮವಾರ ಉಸಿರಾಟದ ಸಮಸ್ಯೆ ತೀವ್ರಗೊಂಡ ಕಾರಣ ಬಾಪೂಜಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾಕ್ಕೆ ಸಂಬಂಧಿಸಿದಂತೆ ಆರ್‌ಟಿ–ಪಿಸಿಆರ್‌ ಪರೀಕ್ಷೆ ಮಾಡಿದಾಗ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಡಿಎಆರ್‌ ಡಿವೈಎಸ್‌ಪಿ ಪ್ರಕಾಶ್‌ ತಿಳಿಸಿದ್ದಾರೆ.

1996ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT