‘26 ಒಳಪಂಗಡಗಳನ್ನು ಒಳಗೊಂಡಿರುವ ನಮ್ಮ ಸಮಾಜದ ಜನಸಂಖ್ಯೆ 80 ಲಕ್ಷ ಇದೆ. ಬಿಜೆಪಿಯಲ್ಲಿ ನಮ್ಮ ಸಮಾಜದ ಏಳು ಶಾಸಕರಿದ್ದರು, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಕಾಂಗ್ರೆಸ್ ಬಿಟ್ಟು ಬಂದು, ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಚುನಾವಣೆಯಲ್ಲಿ ಸೋಲಿಸಿದ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಇನ್ನೂ ಸಚಿವ ಸ್ಥಾನ ನೀಡಿಲ್ಲ. ರಾಜಕೀಯವಾಗಿ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು’ ಎಂದು ಸ್ವಾಮೀಜಿ ಆಗ್ರಹಿಸಿದರು.