ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Last Updated 23 ಸೆಪ್ಟೆಂಬರ್ 2020, 1:43 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ವಾರಿಯರ್‌ಗಳಾಗಿರುವ ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ ಮಾಡಲಾಗುವುದು ಎಂದು ಎರಡು ತಿಂಗಳ ಹಿಂದೆ ಭರವಸೆ ನೀಡಿರುವ ಸರ್ಕಾರ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು 20 ದಿನಗಳ ನಿರಂತರ ಹೋರಾಟ ಮಾಡಿದ ಬಳಿಕ ಸರ್ಕಾರ ಭರವಸೆ ನೀಡಿತ್ತು. ಕೊಟ್ಟ ಮಾತಿಗೆ ತಪ್ಪದೇ ಕೂಡಲೇ ಭರವಸೆ ಈಡೇರಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ ₹ 12 ಸಾವಿರ ನೀಡಬೇಕು. ಬಾಕಿ ಇರುವ ಪ್ರೋತ್ಸಾಹಧನ ಒದಗಿಸಬೇಕು. ಕೋವಿಡ್‌ ಪ್ರೋತ್ಸಾಹಧನ ತಲುಪದವರಿಗೆ ತಲುಪಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ಕಾರ್ಯದರ್ಶಿ ನಾಗವೇಣಿ ಹಿರೇಮಳಲಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT