<p><strong>ಚನ್ನಗಿರಿ:</strong> ಪ್ರತಿ ವರ್ಷ ರೈತರು ನೀರಿಗಾಗಿ ತೊಂದರೆಪಡುತ್ತಿರುವುದನ್ನು ಮನಗಂಡು ಕೇಂದ್ರ ಸರ್ಕಾರ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ ಅಟಲ್ ಭೂಜಲ್ ಯೋಜನೆಯನ್ನು ಜಾರಿಗೆ ತಂದಿದೆ. ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಜಾರಿಯಾಗಲಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಟಲ್ ಭೂಜಲ ಯೋಜನೆ ಸಮರ್ಪಕ<br />ಅನುಷ್ಠಾನ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಈ ಯೋಜನೆ ಅಡಿ ರಾಜ್ಯದ 14 ಜಿಲ್ಲೆಗಳ 41 ತಾಲ್ಲೂಕುಗಳ 1,199 ಗ್ರಾಮ ಪಂಚಾಯಿತಿಗಳು ಯೋಜನೆ<br />ವ್ಯಾಪ್ತಿಗೆ ಒಳಪಟ್ಟಿವೆ. ಈ ಯೋಜನೆಯನ್ನು ಪ್ರಾಥಮಿಕ ಹಂತದಲ್ಲಿ ರಾಜ್ಯದ ನೀರಿನ ಸಮಸ್ಯೆ ಇರುವ ಗ್ರಾಮ<br />ಪಂಚಾಯಿತಿಗಳಲ್ಲಿ ₹ 1,201 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ಮೊದಲ ಹಂತದಲ್ಲಿ ಈ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿದ್ದು, ಇನ್ನು 24 ಪಂಚಾಯಿತಿಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<p>ಈ ಯೋಜನೆ ಅಡಿ ಅಂತರ್ಜಲ ಮಟ್ಟ ಹೆಚ್ಚಿಸಲು ಕೆರೆ ಹಾಗೂ ಚೆಕ್ಡ್ಯಾಂಗಳನ್ನು ನಿರ್ಮಿಸಲಾಗುವುದು. ಜಮೀನುಗಳಲ್ಲಿ ಮಳೆಯ ನೀರು ಹೊರ ಹೋಗದಂತೆ ತಡೆಯಲು ಬದುಗಳನ್ನು ನಿರ್ಮಿಸಲಾಗುವುದು. ಕೃಷಿ ಇಲಾಖೆಯ ವಾಟರ್ ಶೆಡ್ ಯೋಜನೆಗೆ ₹ 13 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸಂತೇಬೆನ್ನೂರು, ಕೆರೆಬಿಳಚಿ, ದೊಡ್ಡಬ್ಬಿಗೆರೆ ಗ್ರಾಮಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಹಿರಿಯ ಭೂ ವಿಜ್ಞಾನಿ ಶಫೀವುಲ್ಲಾ ಅಹಮದ್, ಜಿಲ್ಲಾ ಹಿರಿಯ ಭೂ ವಿಜ್ಞಾನಿ ಬಸವರಾಜ್, ಎಇಇ ಅನಿಲ್ ಕುಮಾರ್, ಯೋಜನೆಯ ತಜ್ಞ ಅಂಬರೀಶ್, ಭಾಗ್ಯಲಕ್ಷ್ಮೀ, ಎ. ಹುಲಿಗೇಶ್, ಈಶ್ವರ್ ನಾಯ್ಕ,ಶ್ವೇತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಪ್ರತಿ ವರ್ಷ ರೈತರು ನೀರಿಗಾಗಿ ತೊಂದರೆಪಡುತ್ತಿರುವುದನ್ನು ಮನಗಂಡು ಕೇಂದ್ರ ಸರ್ಕಾರ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ ಅಟಲ್ ಭೂಜಲ್ ಯೋಜನೆಯನ್ನು ಜಾರಿಗೆ ತಂದಿದೆ. ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಜಾರಿಯಾಗಲಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಟಲ್ ಭೂಜಲ ಯೋಜನೆ ಸಮರ್ಪಕ<br />ಅನುಷ್ಠಾನ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಈ ಯೋಜನೆ ಅಡಿ ರಾಜ್ಯದ 14 ಜಿಲ್ಲೆಗಳ 41 ತಾಲ್ಲೂಕುಗಳ 1,199 ಗ್ರಾಮ ಪಂಚಾಯಿತಿಗಳು ಯೋಜನೆ<br />ವ್ಯಾಪ್ತಿಗೆ ಒಳಪಟ್ಟಿವೆ. ಈ ಯೋಜನೆಯನ್ನು ಪ್ರಾಥಮಿಕ ಹಂತದಲ್ಲಿ ರಾಜ್ಯದ ನೀರಿನ ಸಮಸ್ಯೆ ಇರುವ ಗ್ರಾಮ<br />ಪಂಚಾಯಿತಿಗಳಲ್ಲಿ ₹ 1,201 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ಮೊದಲ ಹಂತದಲ್ಲಿ ಈ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿದ್ದು, ಇನ್ನು 24 ಪಂಚಾಯಿತಿಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<p>ಈ ಯೋಜನೆ ಅಡಿ ಅಂತರ್ಜಲ ಮಟ್ಟ ಹೆಚ್ಚಿಸಲು ಕೆರೆ ಹಾಗೂ ಚೆಕ್ಡ್ಯಾಂಗಳನ್ನು ನಿರ್ಮಿಸಲಾಗುವುದು. ಜಮೀನುಗಳಲ್ಲಿ ಮಳೆಯ ನೀರು ಹೊರ ಹೋಗದಂತೆ ತಡೆಯಲು ಬದುಗಳನ್ನು ನಿರ್ಮಿಸಲಾಗುವುದು. ಕೃಷಿ ಇಲಾಖೆಯ ವಾಟರ್ ಶೆಡ್ ಯೋಜನೆಗೆ ₹ 13 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸಂತೇಬೆನ್ನೂರು, ಕೆರೆಬಿಳಚಿ, ದೊಡ್ಡಬ್ಬಿಗೆರೆ ಗ್ರಾಮಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಹಿರಿಯ ಭೂ ವಿಜ್ಞಾನಿ ಶಫೀವುಲ್ಲಾ ಅಹಮದ್, ಜಿಲ್ಲಾ ಹಿರಿಯ ಭೂ ವಿಜ್ಞಾನಿ ಬಸವರಾಜ್, ಎಇಇ ಅನಿಲ್ ಕುಮಾರ್, ಯೋಜನೆಯ ತಜ್ಞ ಅಂಬರೀಶ್, ಭಾಗ್ಯಲಕ್ಷ್ಮೀ, ಎ. ಹುಲಿಗೇಶ್, ಈಶ್ವರ್ ನಾಯ್ಕ,ಶ್ವೇತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>