<p><strong>ಹೊನ್ನಾಳಿ</strong>: ‘ಭಾರತದ ಅಭಿವೃದ್ಧಿ ರಥಕ್ಕೆ ರಾಜಮಾರ್ಗ ನಿರ್ಮಿಸಿದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿ ಅವರು ಮಾತನಾಡಿದರು.</p>.<p>‘ಪಿ.ಎಂ. ಗ್ರಾಮ ಸಡಕ್ ಯೋಜನೆ, ಸರ್ವಶಿಕ್ಷಾ ಅಭಿಯಾನ, ರೈತರ ಬೆಳೆ ವಿಮಾ ಯೋಜನೆ, ಚತುಷ್ಪಥ ರಸ್ತೆ ಸೇರಿದಂತೆ ಹತ್ತಾರು ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜಕಾರಣದಲ್ಲಿ ಒಂದು ಹೊಸ ಮನ್ವಂತರ ಸೃಷ್ಟಿಸಿದವರು ವಾಜಪೇಯಿ’ ಎಂದರು.</p>.<p>ಡಿ. 27ರಂದು ಬೆಳಿಗ್ಗೆ 10 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜಯಂತ್ಯುತ್ಸವವನ್ನು ಆಚರಿಸಲಾಗುವುದು ಎಂದು ರೇಣುಕಾಚಾರ್ಯ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಕೆ.ಪಿ. ಕುಬೇರಪ್ಪ, ಮಂಜುನಾಥ್ ನೆಲಹೊನ್ನೆ, ಮಾರುತಿನಾಯ್ಕ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ‘ಭಾರತದ ಅಭಿವೃದ್ಧಿ ರಥಕ್ಕೆ ರಾಜಮಾರ್ಗ ನಿರ್ಮಿಸಿದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿ ಅವರು ಮಾತನಾಡಿದರು.</p>.<p>‘ಪಿ.ಎಂ. ಗ್ರಾಮ ಸಡಕ್ ಯೋಜನೆ, ಸರ್ವಶಿಕ್ಷಾ ಅಭಿಯಾನ, ರೈತರ ಬೆಳೆ ವಿಮಾ ಯೋಜನೆ, ಚತುಷ್ಪಥ ರಸ್ತೆ ಸೇರಿದಂತೆ ಹತ್ತಾರು ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜಕಾರಣದಲ್ಲಿ ಒಂದು ಹೊಸ ಮನ್ವಂತರ ಸೃಷ್ಟಿಸಿದವರು ವಾಜಪೇಯಿ’ ಎಂದರು.</p>.<p>ಡಿ. 27ರಂದು ಬೆಳಿಗ್ಗೆ 10 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜಯಂತ್ಯುತ್ಸವವನ್ನು ಆಚರಿಸಲಾಗುವುದು ಎಂದು ರೇಣುಕಾಚಾರ್ಯ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಕೆ.ಪಿ. ಕುಬೇರಪ್ಪ, ಮಂಜುನಾಥ್ ನೆಲಹೊನ್ನೆ, ಮಾರುತಿನಾಯ್ಕ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>