<p><strong>ದಾವಣಗೆರೆ:</strong> ದೌರ್ಜನ್ಯ ಪ್ರಕರಣದಡಿ ಎಫ್ಐಆರ್, ಆರೋಪ ಪಟ್ಟಿ ಮತ್ತು ಶಿಕ್ಷೆಯ ಆಧಾರದ ಮೇಲೆ ವಿವಿಧ ಪ್ರಕರಣಗಳಲ್ಲಿ 162 ಸಂತ್ರಸ್ತರಿಗೆ ₹1.21 ಕೋಟಿ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.</p><p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯ 115 ಮತ್ತು ಪರಿಶಿಷ್ಟ ಪಂಗಡದ 47 ಸಂತ್ರಸ್ತರು ಇದರಲ್ಲಿ ಸೇರಿದ್ದಾರೆ ಎಂದರು.</p><p>2025ರ ಜನವರಿಯಿಂದ ಈವರೆಗೆ ಎರಡು ಕೊಲೆ ಪ್ರಕರಣ ದಾಖಲಾಗಿವೆ. ದೌರ್ಜನ್ಯ ಪ್ರಕರಣದಡಿ ಸರ್ಕಾರಿ ನೌಕರಿಗಾಗಿ 2 ಅರ್ಜಿಗಳು ಸಲ್ಲಿಕೆಯಾಗಿವೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಈವರೆಗೆ 154 ಪ್ರಕರಣಗಳು ಬಾಕಿ ಇದ್ದು, ಇದೇ ವರ್ಷದ ಅಕ್ಟೋಬರ್ನಿಂದ ಈವರೆಗೆ 8 ಪ್ರಕರಣ ವಿಲೇವಾರಿಯಾಗಿದೆ ಎಂದು ಮಾಹಿತಿ ನೀಡಿದರು.</p><p>ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಡಿವೈಎಸ್ಪಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ದೌರ್ಜನ್ಯ ಪ್ರಕರಣದಡಿ ಎಫ್ಐಆರ್, ಆರೋಪ ಪಟ್ಟಿ ಮತ್ತು ಶಿಕ್ಷೆಯ ಆಧಾರದ ಮೇಲೆ ವಿವಿಧ ಪ್ರಕರಣಗಳಲ್ಲಿ 162 ಸಂತ್ರಸ್ತರಿಗೆ ₹1.21 ಕೋಟಿ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.</p><p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯ 115 ಮತ್ತು ಪರಿಶಿಷ್ಟ ಪಂಗಡದ 47 ಸಂತ್ರಸ್ತರು ಇದರಲ್ಲಿ ಸೇರಿದ್ದಾರೆ ಎಂದರು.</p><p>2025ರ ಜನವರಿಯಿಂದ ಈವರೆಗೆ ಎರಡು ಕೊಲೆ ಪ್ರಕರಣ ದಾಖಲಾಗಿವೆ. ದೌರ್ಜನ್ಯ ಪ್ರಕರಣದಡಿ ಸರ್ಕಾರಿ ನೌಕರಿಗಾಗಿ 2 ಅರ್ಜಿಗಳು ಸಲ್ಲಿಕೆಯಾಗಿವೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಈವರೆಗೆ 154 ಪ್ರಕರಣಗಳು ಬಾಕಿ ಇದ್ದು, ಇದೇ ವರ್ಷದ ಅಕ್ಟೋಬರ್ನಿಂದ ಈವರೆಗೆ 8 ಪ್ರಕರಣ ವಿಲೇವಾರಿಯಾಗಿದೆ ಎಂದು ಮಾಹಿತಿ ನೀಡಿದರು.</p><p>ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಡಿವೈಎಸ್ಪಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>