ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ

Last Updated 16 ಏಪ್ರಿಲ್ 2021, 6:16 IST
ಅಕ್ಷರ ಗಾತ್ರ

ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಐದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದೆ.

ತೀವ್ರವಾಗಿ ಗಾಯಗೊಂಡಿರುವ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದೂರು ಗ್ರಾಮಕ್ಕೆ ಪಿಎಸ್ಐ ಬಸನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ‌. ತಪ್ಪಿಸಿಕೊಂಡಿರುವ ಇತರ ನಾಲ್ವರ ಬಂಧನಕ್ಕೆ ಹೊನ್ನಾಳಿ ಪೊಲೀಸರು ಬಲೆ ಬೀಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT