<p><strong>ಹೊನ್ನಾಳಿ</strong>: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಎರಡುಖಾಸಗಿ ಕ್ಲಿನಿಕ್ಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಆಸ್ಪತ್ರೆ ನಡೆಸಲು ಅಗತ್ಯವಿದ್ದ ದಾಖಲೆಗಳನ್ನು ಒದಗಿಸದಿದ್ದರಿಂದ ಕ್ಲಿನಿಕ್ಗಳಿಗೆ ಗುರುವಾರ ಬೀಗ ಹಾಕಿಸಿದರು.</p>.<p>‘ಹೊನ್ನಾಳಿ ತಾಲ್ಲೂಕಿನಾದ್ಯಂತ ಖಾಸಗಿ ಕ್ಲಿನಿಕ್ಗಳಿಗೆ ಭೇಟಿ ನೀಡಿದ್ದು, ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ನಡೆಸುತ್ತಿದ್ದೇವೆ. ಈ ವೇಳೆ ಕೆಲವು ಖಾಸಗಿ ಕ್ಲಿನಿಕ್ಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ ಪರವಾನಗಿ ಅವಧಿ ಮುಕ್ತಾಯವಾಗಿದೆ. ಅಂತಹ ಕ್ಲಿನಿಕ್ಗಳನ್ನು ಬಂದ್ ಮಾಡಿಸಿದ್ದೇವೆ. ಅಂತಹ ಕ್ಲಿನಿಕ್ಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೆಂಚಪ್ಪ ಅವರ ಮೂಲಕ ನೋಟಿಸ್ ಜಾರಿ ಮಾಡಿಸಲಾಗುವುದು’ ಎಂದುತಹಶೀಲ್ದಾರ್ ಬಸನಗೌಡ ಕೋಟೂರ ಹೇಳಿದರು.</p>.<p>ಹೊನ್ನಾಳಿಯಲ್ಲಿರುವ ಈ ಖಾಸಗಿ ಕ್ಲಿನಿಕ್ಗಳಿಗೆ ಪುರಸಭೆಯಿಂದ ನೋಟಿಸ್ ಜಾರಿ ಮಾಡಿ ವಿವರಣೆ ಪಡೆಯಲಾಗುವುದು. ಸಮರ್ಪಕ ದಾಖಲೆಗಳನ್ನು ಸಲ್ಲಿಸದಿದ್ದರೆ ಸಂಬಂಧಪಟ್ಟ ಖಾಸಗಿ ವೈದ್ಯರ ಮೇಲೆ ದೂರು ದಾಖಲಿಸಲಾಗುವುದು ಎಂದು ತಿಳಿಸಿದರು.</p>.<p>ಶೀತ, ಕೆಮ್ಮು ಹಾಗೂ ಜ್ವರ ಬಂದರೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ಸುಮ್ಮನಿದ್ದು ಬಿಡುತ್ತಾರೆ. ಹಾಗೆ ಮಾಡದೆ ಕೊರೊನಾ ಪರೀಕ್ಷೆ ಮಾಡಿಸಬೇಕು ಎಂದು ಸಲಹೆ ನೀಡಿದರು.</p>.<p>ಪಿಎಸ್ಐ ಬಸವನಗೌಡ ಬಿರಾದರ್, ಪುರಸಭೆಯ ಮುಖ್ಯಾಧಿಕಾರಿ ಅಶೋಕ್, ಪೊಲೀಸ್ ಸಿಬ್ಬಂದಿ ವೆಂಕಟೇಶ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಎರಡುಖಾಸಗಿ ಕ್ಲಿನಿಕ್ಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಆಸ್ಪತ್ರೆ ನಡೆಸಲು ಅಗತ್ಯವಿದ್ದ ದಾಖಲೆಗಳನ್ನು ಒದಗಿಸದಿದ್ದರಿಂದ ಕ್ಲಿನಿಕ್ಗಳಿಗೆ ಗುರುವಾರ ಬೀಗ ಹಾಕಿಸಿದರು.</p>.<p>‘ಹೊನ್ನಾಳಿ ತಾಲ್ಲೂಕಿನಾದ್ಯಂತ ಖಾಸಗಿ ಕ್ಲಿನಿಕ್ಗಳಿಗೆ ಭೇಟಿ ನೀಡಿದ್ದು, ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ನಡೆಸುತ್ತಿದ್ದೇವೆ. ಈ ವೇಳೆ ಕೆಲವು ಖಾಸಗಿ ಕ್ಲಿನಿಕ್ಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ ಪರವಾನಗಿ ಅವಧಿ ಮುಕ್ತಾಯವಾಗಿದೆ. ಅಂತಹ ಕ್ಲಿನಿಕ್ಗಳನ್ನು ಬಂದ್ ಮಾಡಿಸಿದ್ದೇವೆ. ಅಂತಹ ಕ್ಲಿನಿಕ್ಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೆಂಚಪ್ಪ ಅವರ ಮೂಲಕ ನೋಟಿಸ್ ಜಾರಿ ಮಾಡಿಸಲಾಗುವುದು’ ಎಂದುತಹಶೀಲ್ದಾರ್ ಬಸನಗೌಡ ಕೋಟೂರ ಹೇಳಿದರು.</p>.<p>ಹೊನ್ನಾಳಿಯಲ್ಲಿರುವ ಈ ಖಾಸಗಿ ಕ್ಲಿನಿಕ್ಗಳಿಗೆ ಪುರಸಭೆಯಿಂದ ನೋಟಿಸ್ ಜಾರಿ ಮಾಡಿ ವಿವರಣೆ ಪಡೆಯಲಾಗುವುದು. ಸಮರ್ಪಕ ದಾಖಲೆಗಳನ್ನು ಸಲ್ಲಿಸದಿದ್ದರೆ ಸಂಬಂಧಪಟ್ಟ ಖಾಸಗಿ ವೈದ್ಯರ ಮೇಲೆ ದೂರು ದಾಖಲಿಸಲಾಗುವುದು ಎಂದು ತಿಳಿಸಿದರು.</p>.<p>ಶೀತ, ಕೆಮ್ಮು ಹಾಗೂ ಜ್ವರ ಬಂದರೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ಸುಮ್ಮನಿದ್ದು ಬಿಡುತ್ತಾರೆ. ಹಾಗೆ ಮಾಡದೆ ಕೊರೊನಾ ಪರೀಕ್ಷೆ ಮಾಡಿಸಬೇಕು ಎಂದು ಸಲಹೆ ನೀಡಿದರು.</p>.<p>ಪಿಎಸ್ಐ ಬಸವನಗೌಡ ಬಿರಾದರ್, ಪುರಸಭೆಯ ಮುಖ್ಯಾಧಿಕಾರಿ ಅಶೋಕ್, ಪೊಲೀಸ್ ಸಿಬ್ಬಂದಿ ವೆಂಕಟೇಶ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>