ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನ: ದೂರು ದಾಖಲು

Last Updated 20 ಜೂನ್ 2019, 4:17 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಗ್ರೇಡ್‌–2 ತಹಶೀಲ್ದಾರ್‌ ಕಚೇರಿಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಚನ್ನಗಿರಿ ತಾಲ್ಲೂಕಿನ ನವಿಲೆಹಾಳು ಗ್ರಾಮದ ಅಲ್ಲಾಭಕ್ಷ್‌ ಟಿ. ಕಚೇರಿ ಆವರಣದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಜಮೀನು ಸ್ವಾಧೀನ ಸಂಬಂಧ ಅಲ್ಲಾಭಕ್ಷ್‌ಗೆ ಪರಿಹಾರದ ಹಣ ನೀಡಲಾಗಿದೆ. ಬೆಳೆನಷ್ಟ ಸಂಬಂಧದ ವೈಯಕ್ತಿಕ ವ್ಯಾಜ್ಯದ ಪರಿಹಾರದ ಮೊತ್ತವನ್ನು ಸಿವಿಲ್ ನ್ಯಾಯಾಲಯದಲ್ಲಿ ಠೇವಣಿ ಇಡಲಾಗಿದೆ. ಈ ಹಣವನ್ನು ನೀಡುವಂತೆ ಆತ ಹಲವು ಬಾರಿ ಕಚೇರಿಗೆ ಬಂದು ಕೇಳುತ್ತಿದ್ದ. ನ್ಯಾಯಾಲಯಕ್ಕೆ ಹಾಜರಾಗಿ ಪರಿಹಾರದ ಹಣ ಪಡೆಯುವಂತೆ ಸೂಚಿಸಲಾಗಿತ್ತು. ಆದರೂ ಬುಧವಾರ ಕಚೇರಿ ಆವರಣದಲ್ಲಿ ಇದೇ ವಿಚಾರಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದು, ಕ್ರಮ ಕೈಗೊಳ್ಳಬೇಕು’ ಎಂದು ಗ್ರೇಡ್‌–2 ತಹಶೀಲ್ದಾರ್‌ ಗಿರೀಶ್ ಬಾಬು ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT