ಕೂಡಲೇ ಮಕ್ಕಳ ಸಹಾಯವಾಣಿ ಕೊಲ್ಯಾಬ್ ತಂಡವು ಕಾಡಜ್ಜಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕೆಂಚಪ್ಪ, ಅಧ್ಯಕ್ಷೆ ಗೀತಮ್ಮ, ಮುಖ್ಯ ಶಿಕ್ಷಕರಾದ ನಾಗರಾಜ ಕೆ.ಎಸ್., ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾದರ್ಶಿನಿ, ಅಂಗನವಾಡಿ ಮೇಲ್ವಿಚಾಕರಾದ ಕವಿತಾ, ಹೆಡ್ ಕಾನ್ಸ್ಟೆಬಲ್ ಎಸ್.ಆರ್.ಲಕ್ಷ್ಮಿಪತಿ, ರೈತ ಮುಖಂಡ ಚಂದ್ರಪ್ಪ ಅವರೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡಿ ಬಾಲಕಿಯ ಪೋಷಕರಿಗೆ ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಹಾಗೂ ಶಿಕ್ಷೆ ಬಗ್ಗೆ ಅರಿವು ಮೂಡಿಸಲಾಯಿತು.