ಬೆಳಗಾವಿಯಲ್ಲಿ ಎಂಇಎಸ್ ಮಾಡುವ ಪುಂಡಾಟಿಕೆಯನ್ನು ರಾಜ್ಯದ ಮರಾಠ ಜನಾಂಗದವರು ಖಂಡಿಸಿದ್ದಾರೆ. ಆ ಕಾರಣದಿಂದ ಪ್ರಾಧಿಕಾರ ರಚನೆ ವಿರೋಧಿಸುವುದು ಸರಿಯಲ್ಲ. ಕನ್ನಡಿಗರ ಮೇಲೆ ದಾಳಿ ಮಾಡಿದ, ಮತಾಂತರ ಮಾಡಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸುವ, ಅಲ್ಪಸಂಖ್ಯಾತರಿಗೆ ಪ್ರವಾಸ ಭಾಗ್ಯ, ಶಾದಿ ಭಾಗ್ಯ ನೀಡಿ ಸಮುದಾಯದಲ್ಲಿ ತಾರತಮ್ಯ ಮಾಡುವ ಸಿದ್ದರಾಮಯ್ಯ ಅವರಿಗೆ ಮರಾಠರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ ಎಂದು ದೂರಿದರು.