ಬಳ್ಳಾರಿ: ‘ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುದ್ರಣಕಾರರು ಸೇವೆ ಒದಗಿಸಬೇಕು. ಉಲ್ಲಂಘನೆ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಪಾಲಿಕೆ ಆಯುಕ್ತ ಬಿ.ಎಚ್.ನಾರಾಯಣಪ್ಪ ಎಚ್ಚರಿಕೆ ನೀಡಿದರು.ನಗರದ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ನಗರ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಮುದ್ರಣಕಾರರ ಸಭೆಯಲ್ಲಿ ಮಾತನಾಡಿದ ಅವರು, ‘ವ್ಯಕ್ತಿ, ಜಾತಿ, ಧರ್ಮ ನಿಂದನೆ ಮಾಡುವ ಹಾಗೂ ಕೋಮು ಸಾಮರಸ್ಯ ಕದಡುವ ಪ್ರಚೋದನಕಾರಿ ಕರಪತ್ರಗಳನ್ನು ಮುದ್ರಿಸಬಾರದು. ಕರಪತ್ರದ ಕೆಳಭಾಗದಲ್ಲಿ ಮುದ್ರಣಾಲಯದ ಹೆಸರು, ಮೊಬೈಲ್ ಸಂಖ್ಯೆ, ಮುದ್ರಿಸಿದ ಕರಪತ್ರಗಳ ನಿಖರ ಸಂಖ್ಯೆಯನ್ನು ನಮೂದಿಸಬೇಕು’ ಎಂದು ಸ್ಪಷ್ಟಪಡಿಸಿದರು.