<p><strong>ದಾವಣಗೆರೆ: </strong>ಕನ್ನಡದ ಅಭಿಮಾನ ಅರಿವಿನ ಮೂಲಕ ಹುಟ್ಟಬೇಕು. ಅದು ಕೇವಲ ವಸ್ತುವಾಗಬಾರದು. ಹಾಡುವುದರಿಂದಾಗಲಿ ಅಥವಾ ಕನ್ನಡದ ಬಾವುಟ ಹಾರಿಸುವುದ ರಿಂದಾಗಲಿ, ಕನ್ನಡ ವಿರೋಧಿಗಳಿಗೆ ಮಸಿ ಬಳಿಯುವುದರಿಂದಾಗಲಿ ನಾವು ಕನ್ನಡವನ್ನು ಕಾಪಾಡುತ್ತೇವೆ ಎನ್ನುವುದು ಸತ್ಯವಲ್ಲ ಎಂದು ಡಾ. ದಾದಾಪೀರ್ ನವಿಲೇಹಾಳ್ ತಿಳಿಸಿದರು.</p>.<p>ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಅಂತರ್ಜಾಲದ ಮೂಲಕ ಕನ್ನಡ ನುಡಿಹಬ್ಬ ಕಾರ್ಯಕ್ರಮದ 25ನೇ ದಿನದ ಉಪನ್ಯಾಸದಲ್ಲಿ ‘ನನ್ನ ಅರಿವಿನ ಭಾಷೆಯಾಗಿ ಕನ್ನಡ’ ಎಂಬ ವಿಷಯದ ಕುರಿತಾಗಿ ಮಾತನಾಡಿದರು.</p>.<p>ಮುಂದುವರಿದು ಮಾತನಾಡುತ್ತಾ, ಕನ್ನಡದ ರಕ್ಷಣೆ ವಾಸ್ತವವಾಗಿ ಕನ್ನಡವನ್ನು ಸೃಜನಶೀಲವಾಗಿ ಬಳಸುವುದರ ಮೂಲಕ ಕನ್ನಡವನ್ನು ನಾವು ಕಟ್ಟಬೇಕು. ಸೃಜನಶೀಲತೆ ಅಂತಿಮವಾಗಿ ಒಂದು ತಾತ್ವಿಕ ಅರಿವನ್ನು ರೂಪಿಸಬೇಕು. ಈಗಾಗಲೇ ಇರುವ ಅರಿವನ್ನು ಹೆಚ್ಚು ಹರಡುವ ಮೂಲಕ ಅದು ಸಾಧ್ಯವಾಗಬೇಕು ಎಂದು ತಿಳಿಸಿದರು.</p>.<p>ನಮ್ಮ ಬಹುಮುಖ್ಯ ಸಂಪತ್ತು ಯಾವುದೆಂದರೆ ಅದು ವಿವೇಕ. ಅದು ನನ್ನೊಳಗಿನ ಅರಿವನ್ನು ಎಚ್ಚರಗೊಳಿಸುವಂತಹ ಭಾಷೆಯ ಮೂಲಕವೇ ಹುಟ್ಟಬಹುದಾದ ಅಸ್ಮಿತೆ ಅದು ಎಂದರು.</p>.<p>ಕನ್ನಡವನ್ನು ಉಳಿಸಬೇಕಾದಂತಹ ಮತ್ತು ಗಟ್ಟಿಗೊಳಿಸಬೇಕಾದಂತ ಹೊಣೆಯನ್ನು ಹೊತ್ತು ಕೊಳ್ಳುವವರು ಕೃಷಿಯ ಮೂಲದ ಜನಪದಕ್ಕೆ ಹೋಗಬೇಕು. ಇಲ್ಲದೇ ಹೋದರೆಕನ್ನಡವನ್ನು ಕಟ್ಟಿ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ವಾಮದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಸಿ. ಜಿ. ಜಗದೀಶ್ ಕೂಲಂಬಿ ಸ್ವಾಗತಿಸಿದರು. ದಾವಣಗೆರೆಯ ಬೆಳಕು ಜಾನಪದ ಕಲಾ ತಂಡದ ರುದ್ರಾಕ್ಷಿ ಬಾಯಿ ಸಿ ಕೆ ಪುಟ್ಟ ನಾಯಕ್ ನಾಡಗೀತೆ ಹಾಗೂ ಜನಪದ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕನ್ನಡದ ಅಭಿಮಾನ ಅರಿವಿನ ಮೂಲಕ ಹುಟ್ಟಬೇಕು. ಅದು ಕೇವಲ ವಸ್ತುವಾಗಬಾರದು. ಹಾಡುವುದರಿಂದಾಗಲಿ ಅಥವಾ ಕನ್ನಡದ ಬಾವುಟ ಹಾರಿಸುವುದ ರಿಂದಾಗಲಿ, ಕನ್ನಡ ವಿರೋಧಿಗಳಿಗೆ ಮಸಿ ಬಳಿಯುವುದರಿಂದಾಗಲಿ ನಾವು ಕನ್ನಡವನ್ನು ಕಾಪಾಡುತ್ತೇವೆ ಎನ್ನುವುದು ಸತ್ಯವಲ್ಲ ಎಂದು ಡಾ. ದಾದಾಪೀರ್ ನವಿಲೇಹಾಳ್ ತಿಳಿಸಿದರು.</p>.<p>ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಅಂತರ್ಜಾಲದ ಮೂಲಕ ಕನ್ನಡ ನುಡಿಹಬ್ಬ ಕಾರ್ಯಕ್ರಮದ 25ನೇ ದಿನದ ಉಪನ್ಯಾಸದಲ್ಲಿ ‘ನನ್ನ ಅರಿವಿನ ಭಾಷೆಯಾಗಿ ಕನ್ನಡ’ ಎಂಬ ವಿಷಯದ ಕುರಿತಾಗಿ ಮಾತನಾಡಿದರು.</p>.<p>ಮುಂದುವರಿದು ಮಾತನಾಡುತ್ತಾ, ಕನ್ನಡದ ರಕ್ಷಣೆ ವಾಸ್ತವವಾಗಿ ಕನ್ನಡವನ್ನು ಸೃಜನಶೀಲವಾಗಿ ಬಳಸುವುದರ ಮೂಲಕ ಕನ್ನಡವನ್ನು ನಾವು ಕಟ್ಟಬೇಕು. ಸೃಜನಶೀಲತೆ ಅಂತಿಮವಾಗಿ ಒಂದು ತಾತ್ವಿಕ ಅರಿವನ್ನು ರೂಪಿಸಬೇಕು. ಈಗಾಗಲೇ ಇರುವ ಅರಿವನ್ನು ಹೆಚ್ಚು ಹರಡುವ ಮೂಲಕ ಅದು ಸಾಧ್ಯವಾಗಬೇಕು ಎಂದು ತಿಳಿಸಿದರು.</p>.<p>ನಮ್ಮ ಬಹುಮುಖ್ಯ ಸಂಪತ್ತು ಯಾವುದೆಂದರೆ ಅದು ವಿವೇಕ. ಅದು ನನ್ನೊಳಗಿನ ಅರಿವನ್ನು ಎಚ್ಚರಗೊಳಿಸುವಂತಹ ಭಾಷೆಯ ಮೂಲಕವೇ ಹುಟ್ಟಬಹುದಾದ ಅಸ್ಮಿತೆ ಅದು ಎಂದರು.</p>.<p>ಕನ್ನಡವನ್ನು ಉಳಿಸಬೇಕಾದಂತಹ ಮತ್ತು ಗಟ್ಟಿಗೊಳಿಸಬೇಕಾದಂತ ಹೊಣೆಯನ್ನು ಹೊತ್ತು ಕೊಳ್ಳುವವರು ಕೃಷಿಯ ಮೂಲದ ಜನಪದಕ್ಕೆ ಹೋಗಬೇಕು. ಇಲ್ಲದೇ ಹೋದರೆಕನ್ನಡವನ್ನು ಕಟ್ಟಿ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ವಾಮದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಸಿ. ಜಿ. ಜಗದೀಶ್ ಕೂಲಂಬಿ ಸ್ವಾಗತಿಸಿದರು. ದಾವಣಗೆರೆಯ ಬೆಳಕು ಜಾನಪದ ಕಲಾ ತಂಡದ ರುದ್ರಾಕ್ಷಿ ಬಾಯಿ ಸಿ ಕೆ ಪುಟ್ಟ ನಾಯಕ್ ನಾಡಗೀತೆ ಹಾಗೂ ಜನಪದ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>