ದಾವಣಗೆರೆ: ಕನ್ನಡದ ಅಭಿಮಾನ ಅರಿವಿನ ಮೂಲಕ ಹುಟ್ಟಬೇಕು. ಅದು ಕೇವಲ ವಸ್ತುವಾಗಬಾರದು. ಹಾಡುವುದರಿಂದಾಗಲಿ ಅಥವಾ ಕನ್ನಡದ ಬಾವುಟ ಹಾರಿಸುವುದ ರಿಂದಾಗಲಿ, ಕನ್ನಡ ವಿರೋಧಿಗಳಿಗೆ ಮಸಿ ಬಳಿಯುವುದರಿಂದಾಗಲಿ ನಾವು ಕನ್ನಡವನ್ನು ಕಾಪಾಡುತ್ತೇವೆ ಎನ್ನುವುದು ಸತ್ಯವಲ್ಲ ಎಂದು ಡಾ. ದಾದಾಪೀರ್ ನವಿಲೇಹಾಳ್ ತಿಳಿಸಿದರು.