ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮತದಾನ ಮಹತ್ವ ತಿಳಿಸಲು ಜಾಗೃತಿ ಕಾರ್ಯಕ್ರಮ’

Last Updated 11 ಏಪ್ರಿಲ್ 2019, 16:31 IST
ಅಕ್ಷರ ಗಾತ್ರ

ಹೊನ್ನಾಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಮದಡಿ ಜಿಲ್ಲೆಯ 233 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಸವರಾಜೇಂದ್ರ ಹೇಳಿದರು.

ಗುರುವಾರ ಟಿ.ಬಿ. ವೃತ್ತದಲ್ಲಿ ಮಹಿಳಾ ಕಾರು ರ‍್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವನ್ನು ಮೂಡಿಸಲು ದಾವಣಗೆರೆ, ಸಂತೇಬೆನ್ನೂರು, ಚನ್ನಗಿರಿ, ಬಸವಾಪಟ್ಟಣದ ಮೂಲಕ ಹೊನ್ನಾಳಿಗೆ ರ‍್ಯಾಲಿ ಬಂದಿದ್ದು, ಇಲ್ಲಿನ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಸಿ, ನಂತರ ಮಲೆಬೆನ್ನೂರು, ಹರಿಹರದ ಮೂಲಕ ದಾವಣಗೆರೆಗೆ ತಂಡ ಹಿಂದಿರುಗಲಿದೆ ಎಂದರು.

ಚುನಾವಣೆ ಹಬ್ಬದಂತೆ ಅದಕ್ಕಾಗಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ಮತದಾನ ಜಾಗೃತಿ ತಂಡಗಳು ಮನೆ ಮನೆಗಳಿಗೆ ತೆರಳಿ ಮತದಾನದ ಮಹತ್ವಗಳನ್ನು ಜನರಿಗೆ ತಿಳಿಹೇಳುವ ಕೆಲಸ ಮಾಡುತ್ತಿವೆ ಎಂದರು.

ಕಳೆದ ಬಾರಿ ಅತಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ಅಲ್ಲಿ ಚುನಾವಣಾ ಪಾಠಶಾಲಾ ಕಾರ್ಯಕ್ರಮಗಳ ಮೂಲಕ ಹೆಚ್ಚು ಮತದಾನ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.

ದಾವಣಗೆರೆಯಲ್ಲಿ ಏ. 12 ರಂದು ಮತದಾನದ ಬಗ್ಗೆ ಕವಿಗೋಷ್ಠಿ. 13 ರಂದು ಸಹಿ ಸಂಗ್ರಹ ಅಭಿಯಾನ, ಪೊಲೀಸರ ಬೈಕ್ ರ‍್ಯಾಲಿ ಸೇರಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅಂಜನೇಯ, ತಾಲ್ಲೂಕು ಸಹಾಯಕ ಚುನಾವಣಾಧಿಕಾರಿ ಸುರೇಶ್ ರೆಡ್ಡಿ, ತಹಶೀಲ್ದಾರ್ ಮಲ್ಲಿಕಾರ್ಜುನ್, ನ್ಯಾಮತಿ ತಹಶೀಲ್ದಾರ್ ರೇಣುಕಾ, ತಾಲ್ಲೂಕು ಪಂಚಾಯಿತಿ ಇ.ಒ. ರಾಘವೇಂದ್ರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಲಚಂದ್ರ ಸೇರಿ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT