‘ಕಾಂಗ್ರೆಸ್ ಸರ್ಕಾರ ಬಂದು 7 ತಿಂಗಳಾದರೂ ಐಸಿಸಿ ಸಭೆ ಕರೆದಿಲ್ಲ. ಸಚಿವ ಮಧು ಬಂಗಾರಪ್ಪ ಅವರಿಗೆ ಜವಾಬ್ದಾರಿ ವಹಿಸಿದ್ದು, ಇಷ್ಟಬಂದಂತೆ ಅವರು ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ. ಸಲಹಾ ಸಮಿತಿಗೆ ಸದಸ್ಯರ ನೇಮಕವಾಗದಿದ್ದರೂ ಆಯಾ ಕ್ಷೇತ್ರದ ಶಾಸಕರು ಸದಸ್ಯರಾಗಿರುವುದರಿಂದ ಹರಿಹರ, ಹರಪನಹಳ್ಳಿ ಹಾಗೂ ದಾವಣಗೆರೆ ಶಾಸಕರ ಜೊತೆ ಚರ್ಚಿಸಿ ಆರೋಗ್ಯಕರ ಚರ್ಚೆ ಮೂಲಕ ತೀರ್ಮಾನ ಕೈಗೊಳ್ಳಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.