ದಾವಣಗೆರೆ: ಕಳೆದ ಮೇ ತಿಂಗಳಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸಿರುವ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರ ಕಾರ್ಯವನ್ನು ಪ್ರಶಂಸಿಸಿರುವ ಭಾರತೀಯ ಚುನಾವಣಾ ಆಯೋಗವು, ಕಲಬುರ್ಗಿ ವಿಭಾಗದ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿಯನ್ನು ಅವರಿಗೆ ನೀಡಿದೆ.