<p><strong>ದಾವಣಗೆರೆ:</strong> ಬಂಜಾರರು ತಲತಲಾಂತರದಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಸರ್ಕಾರಿ, ಅರೆ ಸರ್ಕಾರಿ ಮತ್ತು ಅರಣ್ಯ ಭೂಮಿಯನ್ನು ಸಕ್ರಮಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಮನವಿ ಸಲ್ಲಿಸಿತು.</p>.<p>ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಬಳಿಯ ಭಾಯಾಗಡದಲ್ಲಿ ಬುಧವಾರ ನಡೆದ ಸಂತ ಸೇವಾಲಾಲ್ ಅವರ 285ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರಿಗೆ ಸಮಿತಿಯ ಅಧ್ಯಕ್ಷ ರುದ್ರಪ್ಪ ಎಂ.ಲಮಾಣಿ ಮನವಿ ಸಲ್ಲಿಸಿದರು.</p>.<p>‘ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಭೂ ಯೋಜನೆಗೆ ಹೆಚ್ಚು ಅನುದಾನ ನೀಡಬೇಕು. ಸರ್ಕಾರವು ಬಂಜಾರ ಕುಟುಂಬಗಳು ಭೂ ಒಡೆತನ ಹೊಂದಲು ಅಗತ್ಯ ಕಾರ್ಯಕ್ರಮ ರೂಪಿಸಬೇಕು’ ಎಂದು ಸಮಿತಿ ಸದಸ್ಯರು ಆಗ್ರಹಿಸಿದರು.</p>.<p>‘ಭಾಯಾಗಡದಲ್ಲಿರುವ ಸಪ್ತ ಮಾತೃಕೆಯರ ಕೊಳದ ನವೀಕರಣ ಮತ್ತು ಕಾಗಿನೆಲೆ ಕ್ಷೇತ್ರದ ಮಾದರಿಯಲ್ಲಿ ಸಂಗೀತ ಕಾರಂಜಿ ನಿರ್ಮಿಸಲು ₹ 1 ಕೋಟಿ ಅನುದಾನ ಮಂಜೂರು ಮಾಡಬೇಕು. ಚಿನ್ನಿಕಟ್ಟೆಯಿಂದ ಹಳೇ ಜೋಗದವರೆಗೆ ಒಟ್ಟು 10 ಕಿ.ಮೀ. ಉದ್ದದ ಚತುಷ್ಪಥ ರಸ್ತೆಗೆ ₹ 44 ಕೋಟಿ ಅಂದಾಜಿನಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ರಸ್ತೆ ನಿರ್ಮಿಸಲು ಅನುದಾನ ನೀಡಬೇಕು’ ಎಂದು ಕೋರಲಾಯಿತು.</p>.<p>‘ಕ್ಷೇತ್ರದಲ್ಲಿ ಅಪೂರ್ಣವಾಗಿರುವ ಯಾತ್ರಿ ನಿವಾಸ ಪೂರ್ಣಗೊಳಿಸಲು ₹ 1 ಕೋಟಿ ಬಿಡುಗಡೆ ಮಾಡಬೇಕು. ಸುತ್ತಲೂ ಇರುವ ವರದನಕೆರೆ, ಭೂತನಕೆರೆ, ಬಸವಣ್ಣನಕೆರೆ, ಮಾಚಗೊಂಡನಹಳ್ಳಿ ಕೆರೆ, ಕೊಡತಾಳು ಕೆರೆಗಳ ಹೂಳು ಎತ್ತಬೇಕು. ಕೆರೆ ಒತ್ತುವರಿ ಪ್ರದೇಶ ತೆರವುಗೊಳಿಸಬೇಕು’ ಎಂದು ಮನವಿ ಮಾಡಿದರು. </p>.<p>‘ಸಮಿತಿಯಿಂದ ನೀಡಲಾಗಿರುವ ಬೇಡಿಕೆ ಪಟ್ಟಿಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸುತ್ತೇನೆ. ಬಂಜಾರ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬಂಜಾರರು ತಲತಲಾಂತರದಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಸರ್ಕಾರಿ, ಅರೆ ಸರ್ಕಾರಿ ಮತ್ತು ಅರಣ್ಯ ಭೂಮಿಯನ್ನು ಸಕ್ರಮಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಮನವಿ ಸಲ್ಲಿಸಿತು.</p>.<p>ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಬಳಿಯ ಭಾಯಾಗಡದಲ್ಲಿ ಬುಧವಾರ ನಡೆದ ಸಂತ ಸೇವಾಲಾಲ್ ಅವರ 285ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರಿಗೆ ಸಮಿತಿಯ ಅಧ್ಯಕ್ಷ ರುದ್ರಪ್ಪ ಎಂ.ಲಮಾಣಿ ಮನವಿ ಸಲ್ಲಿಸಿದರು.</p>.<p>‘ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಭೂ ಯೋಜನೆಗೆ ಹೆಚ್ಚು ಅನುದಾನ ನೀಡಬೇಕು. ಸರ್ಕಾರವು ಬಂಜಾರ ಕುಟುಂಬಗಳು ಭೂ ಒಡೆತನ ಹೊಂದಲು ಅಗತ್ಯ ಕಾರ್ಯಕ್ರಮ ರೂಪಿಸಬೇಕು’ ಎಂದು ಸಮಿತಿ ಸದಸ್ಯರು ಆಗ್ರಹಿಸಿದರು.</p>.<p>‘ಭಾಯಾಗಡದಲ್ಲಿರುವ ಸಪ್ತ ಮಾತೃಕೆಯರ ಕೊಳದ ನವೀಕರಣ ಮತ್ತು ಕಾಗಿನೆಲೆ ಕ್ಷೇತ್ರದ ಮಾದರಿಯಲ್ಲಿ ಸಂಗೀತ ಕಾರಂಜಿ ನಿರ್ಮಿಸಲು ₹ 1 ಕೋಟಿ ಅನುದಾನ ಮಂಜೂರು ಮಾಡಬೇಕು. ಚಿನ್ನಿಕಟ್ಟೆಯಿಂದ ಹಳೇ ಜೋಗದವರೆಗೆ ಒಟ್ಟು 10 ಕಿ.ಮೀ. ಉದ್ದದ ಚತುಷ್ಪಥ ರಸ್ತೆಗೆ ₹ 44 ಕೋಟಿ ಅಂದಾಜಿನಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ರಸ್ತೆ ನಿರ್ಮಿಸಲು ಅನುದಾನ ನೀಡಬೇಕು’ ಎಂದು ಕೋರಲಾಯಿತು.</p>.<p>‘ಕ್ಷೇತ್ರದಲ್ಲಿ ಅಪೂರ್ಣವಾಗಿರುವ ಯಾತ್ರಿ ನಿವಾಸ ಪೂರ್ಣಗೊಳಿಸಲು ₹ 1 ಕೋಟಿ ಬಿಡುಗಡೆ ಮಾಡಬೇಕು. ಸುತ್ತಲೂ ಇರುವ ವರದನಕೆರೆ, ಭೂತನಕೆರೆ, ಬಸವಣ್ಣನಕೆರೆ, ಮಾಚಗೊಂಡನಹಳ್ಳಿ ಕೆರೆ, ಕೊಡತಾಳು ಕೆರೆಗಳ ಹೂಳು ಎತ್ತಬೇಕು. ಕೆರೆ ಒತ್ತುವರಿ ಪ್ರದೇಶ ತೆರವುಗೊಳಿಸಬೇಕು’ ಎಂದು ಮನವಿ ಮಾಡಿದರು. </p>.<p>‘ಸಮಿತಿಯಿಂದ ನೀಡಲಾಗಿರುವ ಬೇಡಿಕೆ ಪಟ್ಟಿಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸುತ್ತೇನೆ. ಬಂಜಾರ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>