<p><strong>ದಾವಣಗೆರೆ</strong>: ನ್ಯಾ. ನಾಗಮೋಹನ ದಾಸ್ ಆಯೋಗದ ವರದಿಯನ್ನು ತಿರಸ್ಕರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬಂಜಾರ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. </p>.<p>ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಕಾರರು ಜಯದೇವ ವೃತ್ತ, ಮಹಾತ್ಮ ಗಾಂಧಿ ವೃತ್ತ, ಪಿ.ಬಿ. ರಸ್ತೆ ಮಾರ್ಗವಾಗಿ ತೆರಳಿ ಉಪ ವಿಭಾಗಾಧಿಕಾರಿ ಕಚೇರಿ ಎದುರು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ರಾಜ್ಯ ಸರ್ಕಾರ ಒಳ ಮೀಸಲಾತಿ ವರ್ಗೀಕರಣದಲ್ಲಿ ಬಂಜಾರ ಸಮುದಾಯದ ಸಾಂವಿಧಾನಿಕ ಮೀಸಲಾತಿಯನ್ನು ಕಿತ್ತುಕೊಳ್ಳುವ ಅಥವಾ ಕಡಿಮೆಗೊಳಿಸುವ ಪ್ರಯತ್ನವನ್ನು ಒಪ್ಪುವುದಿಲ್ಲ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ನಾಗಮೋಹನ ದಾಸ್ ವರದಿಯಲ್ಲಿ ಸ್ಪಶ್ಯ, ಅಸ್ಪಶ್ಯ ಪದಗಳ ಬಳಕೆ ಇದೆ. ಇದು ನಿಷಿದ್ಧವಾಗಿದ್ದರೂ ಆ ಪದವನ್ನು ಬಳಸಿ ಬಂಜಾರ ಸಮುದಾಯವನ್ನು ಸ್ಪಶ್ಯ ಗುಂಪಿನಲ್ಲಿ ಸೇರಿಸಿರುವುದಕ್ಕೆ ನಮ್ಮ ಪ್ರಬಲ ವಿರೋಧವಿದೆ. ನಮ್ಮನ್ನು ಅಸ್ಪಶ್ಯರೆಂದೇ ಪರಿಗಣಿಸಬೇಕು’ ಎಂದು ಆಗ್ರಹಿಸಿದರು. </p>.<p>‘ಆಯೋಗ ಸಂಗ್ರಹಿಸಿದ ವರದಿಯ ಅಂಶಗಳು ಅಪೂರ್ಣ, ಅವೈಜ್ಞಾನಿಕವಾಗಿವೆ. ಅಸ್ಪಷ್ಟ ದತ್ತಾಂಶ ಮತ್ತು ನ್ಯಾಯಸಮ್ಮತವಲ್ಲದ ಶಿಫಾರಸುಗಳನ್ನು ವರದಿ ಒಳಗೊಂಡಿದೆ. ಕಳೆದ 50 ವರ್ಷಗಳಿಂದ ಪರಿಶಿಷ್ಟ ಜಾತಿಗಳ 101 ಸಮುದಾಯಗಳ ಸ್ಥಿತಿಗತಿಗಳ ಮಾಹಿತಿ ಮತ್ತು ಈ ಸಮೀಕ್ಷೆಯ ಸಮಗ್ರ ದತ್ತಾಂಶ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು. </p>.<p>ಸಂತ ಸೇವಾಲಾಲ್ ಅವರ ಪುತ್ಥಳಿಯೊಂದಿಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಕಾರರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದಿದ್ದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಲಂಬಾಣಿ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಮಹಿಳೆಯರೂ ಭಾಗವಹಿಸಿದ್ದರು. </p>.<p>ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಶಿವಪ್ರಕಾಶ ಸ್ವಾಮೀಜಿ, ಮಾಜಿ ಶಾಸಕ ಬಸವರಾಜ ನಾಯ್ಕ, ಪಾಲಿಕೆ ಮಾಜಿ ಸದಸ್ಯ ಶಿವಪ್ರಕಾಶ್, ಮಂಜಾನಾಯ್ಕ, ಮುಖಂಡರಾದ ಅನಿಲ್ ನಾಯ್ಕ, ಹನುಮಂತ ನಾಯ್ಕ, ರಮೇಶ ನಾಯ್ಕ, ಮಲ್ಲೇಶ್ ನಾಯ್ಕ, ಮಂಜು ನಾಯ್ಕ, ಚಿನ್ನಸಮುದ್ರ ಶೇಖರನಾಯ್ಕ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನ್ಯಾ. ನಾಗಮೋಹನ ದಾಸ್ ಆಯೋಗದ ವರದಿಯನ್ನು ತಿರಸ್ಕರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬಂಜಾರ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. </p>.<p>ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಕಾರರು ಜಯದೇವ ವೃತ್ತ, ಮಹಾತ್ಮ ಗಾಂಧಿ ವೃತ್ತ, ಪಿ.ಬಿ. ರಸ್ತೆ ಮಾರ್ಗವಾಗಿ ತೆರಳಿ ಉಪ ವಿಭಾಗಾಧಿಕಾರಿ ಕಚೇರಿ ಎದುರು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ರಾಜ್ಯ ಸರ್ಕಾರ ಒಳ ಮೀಸಲಾತಿ ವರ್ಗೀಕರಣದಲ್ಲಿ ಬಂಜಾರ ಸಮುದಾಯದ ಸಾಂವಿಧಾನಿಕ ಮೀಸಲಾತಿಯನ್ನು ಕಿತ್ತುಕೊಳ್ಳುವ ಅಥವಾ ಕಡಿಮೆಗೊಳಿಸುವ ಪ್ರಯತ್ನವನ್ನು ಒಪ್ಪುವುದಿಲ್ಲ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ನಾಗಮೋಹನ ದಾಸ್ ವರದಿಯಲ್ಲಿ ಸ್ಪಶ್ಯ, ಅಸ್ಪಶ್ಯ ಪದಗಳ ಬಳಕೆ ಇದೆ. ಇದು ನಿಷಿದ್ಧವಾಗಿದ್ದರೂ ಆ ಪದವನ್ನು ಬಳಸಿ ಬಂಜಾರ ಸಮುದಾಯವನ್ನು ಸ್ಪಶ್ಯ ಗುಂಪಿನಲ್ಲಿ ಸೇರಿಸಿರುವುದಕ್ಕೆ ನಮ್ಮ ಪ್ರಬಲ ವಿರೋಧವಿದೆ. ನಮ್ಮನ್ನು ಅಸ್ಪಶ್ಯರೆಂದೇ ಪರಿಗಣಿಸಬೇಕು’ ಎಂದು ಆಗ್ರಹಿಸಿದರು. </p>.<p>‘ಆಯೋಗ ಸಂಗ್ರಹಿಸಿದ ವರದಿಯ ಅಂಶಗಳು ಅಪೂರ್ಣ, ಅವೈಜ್ಞಾನಿಕವಾಗಿವೆ. ಅಸ್ಪಷ್ಟ ದತ್ತಾಂಶ ಮತ್ತು ನ್ಯಾಯಸಮ್ಮತವಲ್ಲದ ಶಿಫಾರಸುಗಳನ್ನು ವರದಿ ಒಳಗೊಂಡಿದೆ. ಕಳೆದ 50 ವರ್ಷಗಳಿಂದ ಪರಿಶಿಷ್ಟ ಜಾತಿಗಳ 101 ಸಮುದಾಯಗಳ ಸ್ಥಿತಿಗತಿಗಳ ಮಾಹಿತಿ ಮತ್ತು ಈ ಸಮೀಕ್ಷೆಯ ಸಮಗ್ರ ದತ್ತಾಂಶ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು. </p>.<p>ಸಂತ ಸೇವಾಲಾಲ್ ಅವರ ಪುತ್ಥಳಿಯೊಂದಿಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಕಾರರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದಿದ್ದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಲಂಬಾಣಿ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಮಹಿಳೆಯರೂ ಭಾಗವಹಿಸಿದ್ದರು. </p>.<p>ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಶಿವಪ್ರಕಾಶ ಸ್ವಾಮೀಜಿ, ಮಾಜಿ ಶಾಸಕ ಬಸವರಾಜ ನಾಯ್ಕ, ಪಾಲಿಕೆ ಮಾಜಿ ಸದಸ್ಯ ಶಿವಪ್ರಕಾಶ್, ಮಂಜಾನಾಯ್ಕ, ಮುಖಂಡರಾದ ಅನಿಲ್ ನಾಯ್ಕ, ಹನುಮಂತ ನಾಯ್ಕ, ರಮೇಶ ನಾಯ್ಕ, ಮಲ್ಲೇಶ್ ನಾಯ್ಕ, ಮಂಜು ನಾಯ್ಕ, ಚಿನ್ನಸಮುದ್ರ ಶೇಖರನಾಯ್ಕ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>