<p><strong>ದಾವಣಗೆರೆ:</strong> ಬ್ಯಾಂಕಿಂಗ್ ಸೇವೆಗಳನ್ನು ವಾರದಲ್ಲಿ ಐದು ದಿನಗಳಿಗೆ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ನೌಕರರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂಭಾಗ ಜಮಾಯಿಸಿದ ಬ್ಯಾಂಕ್ ನೌಕರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಕೇಂದ್ರ ಹಣಕಾಸು ಇಲಾಖೆ ಸರಿಯಾಗಿ ಸ್ಪಂದಿಸದೇ ಇದ್ದರೆ ಜ.27ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>‘ಬ್ಯಾಂಕ್ ನೌಕರರ ಕೆಲಸದ ಅವಧಿಯನ್ನು ವಾರದಲ್ಲಿ ಐದು ದಿನಗಳಿಗೆ ಮಿತಿಗೊಳಿಸುವಂತೆ ಕೇಂದ್ರ ಸರ್ಕಾರದ ಎದುರು ಪ್ರಸ್ತಾವವಿದೆ. ಇದಕ್ಕೆ ಅನುಮೋದನೆ ನೀಡಬೇಕಾದ ಕೇಂದ್ರ ಹಣಕಾಸು ಸೇವೆಗಳ ಇಲಾಖೆ ಎರಡು ವರ್ಷಗಳಿಂದ ವಿಳಂಬ ಮಾಡುತ್ತಿದೆ. ಈ ಕುರಿತು ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು’ ಎಂದು ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಕೆ.ರಾಘವೇಂದ್ರ ನಾಯರಿ ಒತ್ತಾಯಿಸಿದರು.</p>.<p>ವೇದಿಕೆಯ ಮುಖಂಡರಾದ ಕೆ. ವಿಶ್ವನಾಥ ಬಿಲ್ಲವ, ಪ್ರದೀಪ್ ಪಾಟೀಲ, ಎಂ.ಪಿ. ಕಿರಣ್ಕುಮಾರ್, ಶಮಂತ್ ಎಂ., ಸಿದ್ಧಾರ್ಥ್, ಎಚ್.ಎಸ್. ತಿಪ್ಪೇಸ್ವಾಮಿ, ಆರ್. ಆಂಜನೇಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬ್ಯಾಂಕಿಂಗ್ ಸೇವೆಗಳನ್ನು ವಾರದಲ್ಲಿ ಐದು ದಿನಗಳಿಗೆ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ನೌಕರರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂಭಾಗ ಜಮಾಯಿಸಿದ ಬ್ಯಾಂಕ್ ನೌಕರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಕೇಂದ್ರ ಹಣಕಾಸು ಇಲಾಖೆ ಸರಿಯಾಗಿ ಸ್ಪಂದಿಸದೇ ಇದ್ದರೆ ಜ.27ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>‘ಬ್ಯಾಂಕ್ ನೌಕರರ ಕೆಲಸದ ಅವಧಿಯನ್ನು ವಾರದಲ್ಲಿ ಐದು ದಿನಗಳಿಗೆ ಮಿತಿಗೊಳಿಸುವಂತೆ ಕೇಂದ್ರ ಸರ್ಕಾರದ ಎದುರು ಪ್ರಸ್ತಾವವಿದೆ. ಇದಕ್ಕೆ ಅನುಮೋದನೆ ನೀಡಬೇಕಾದ ಕೇಂದ್ರ ಹಣಕಾಸು ಸೇವೆಗಳ ಇಲಾಖೆ ಎರಡು ವರ್ಷಗಳಿಂದ ವಿಳಂಬ ಮಾಡುತ್ತಿದೆ. ಈ ಕುರಿತು ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು’ ಎಂದು ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಕೆ.ರಾಘವೇಂದ್ರ ನಾಯರಿ ಒತ್ತಾಯಿಸಿದರು.</p>.<p>ವೇದಿಕೆಯ ಮುಖಂಡರಾದ ಕೆ. ವಿಶ್ವನಾಥ ಬಿಲ್ಲವ, ಪ್ರದೀಪ್ ಪಾಟೀಲ, ಎಂ.ಪಿ. ಕಿರಣ್ಕುಮಾರ್, ಶಮಂತ್ ಎಂ., ಸಿದ್ಧಾರ್ಥ್, ಎಚ್.ಎಸ್. ತಿಪ್ಪೇಸ್ವಾಮಿ, ಆರ್. ಆಂಜನೇಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>