ಇಲ್ಲಿನ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಸಹಾಯಕ ವ್ಯವಸ್ಥಾಪಕರಾಗಿದ್ದ ಸತ್ಯಾನಂದ ಮುತ್ತಣ್ಣವರ (35) ಮೃತಪಟ್ಟವರು. ಬೆಳಗಾವಿ ಜಿಲ್ಲೆಯ ಗೋಕಾಕದ ಅವರು ಇಲ್ಲಿನ ಸಿದ್ಧವೀರಪ್ಪ ಬಡಾವಣೆಯಲ್ಲಿ ವಾಸವಾಗಿದ್ದರು. ಶನಿವಾರ ಮನೆಯ ಎರಡನೇ ಅಂತಸ್ತಿನಲ್ಲಿರುವ ಟ್ಯಾಂಕಿ ಸ್ವಚ್ಛಗೊಳಿಸಲು ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದು, ಆಸ್ಪತ್ರೆಗೆ ಒಯ್ಯುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.