ಶುಕ್ರವಾರ ಬೆಳಿಗ್ಗೆ ಸಹಾಯವಾಣಿಗೆ ದೂರು ಬಂದ ಹಿನ್ನೆಲೆಯಲ್ಲಿ ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸಂಯೋಜಕರಾದ ಕೊಟ್ರೇಶ್ ಟಿ.ಎಂ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಧರಣಿಕುಮಾರ್.ಎಂ.ಆರ್. ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಭಿಜಿತ್ ಅವರೊಂದಿಗೆ ಮದುವೆಯ ಮುನ್ನಾದಿನ ಮಧ್ಯರಾತ್ರಿ ಬಾಲಕಿಯ ಮನೆಗೆ ತೆರಳಿ ಪೋಷಕರ ಮನವೊಲಿಸಲಾಯಿತು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಬಾಲಕಿಯನ್ನು ಹಾಜರುಪಡಿಸಲಾಯಿತು.