<p><strong>ಸಂತೇಬೆನ್ನೂರು (ದಾವಣಗೆರೆ):</strong> ಹಿಂದೂ ಸಮಾಜ ಒಟ್ಟಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡುವುದು ಸುಲಭ. ಹಿಂದೂಗಳ ಮತಗಳನ್ನು ವಿಭಜಿಸುವ ಕೆಟ್ಟ ಕೆಲಸವನ್ನು ಎಂದಿಗೂ ಮಾಡುವುದಿಲ್ಲ. ಬೇರೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಪಷ್ಟಪಡಿಸಿದರು.</p><p>‘ಹಿಂದೂ ಸಮಾಜ ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿಂದೂತ್ವದ ಆಧಾರದಲ್ಲಿ ನಡೆಯುವುದು ಸ್ಪಷ್ಟವಾಗಿದೆ. ಕಾರ್ಯತಂತ್ರದ ಕುರಿತು ಕೆ.ಎಸ್. ಈಶ್ವರಪ್ಪ ಜತೆಗೆ ಚರ್ಚೆ ನಡೆದಿದೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ಗಣಪತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಹಾಗೂ ಉಗುಳುವ ಕೃತ್ಯಗಳು ಅಲ್ಲಲ್ಲಿ ನಡೆದಿವೆ. ಇದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಅವರ ಜೆಸಿಬಿ ಮಾದರಿ ಆಡಳಿತ ರಾಜ್ಯದಲ್ಲಿ ಬರಬೇಕಿದೆ. ಈ ಬಗ್ಗೆ ಹಿಂದೂತ್ವದ ಕಾರ್ಯಕರ್ತರು ಅಪೇಕ್ಷೆ ವ್ಯಕ್ತಪಡಿಸುತ್ತಿದ್ದಾರೆ’ ಎಂದರು.</p><p>‘ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಿಂದೂ ಸಮಾಜದ ವಿರುದ್ಧ ನೀಡಿದ ಹೇಳಿಕೆಯನ್ನು ಗಮನಿಸಿದ್ದೇನೆ. ಇನ್ನು ಮುಂದಿನ ಚುನಾವಣೆಯಲ್ಲಿ ಮುಸ್ಲಿಂ ಮತಗಳು ಮಾತ್ರವೇ ಶಾಮನೂರು ಕುಟುಂಬಕ್ಕೆ ಬರಲಿವೆ. ಹಿಂದೂಗಳ ಮತಗಳು ಹಿಂದುತ್ವದ ಪ್ರತಿಪಾದಕರಿಗೆ ಸಿಗಲಿವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p><p><strong>‘ಎಸ್ಟಿ ಮೀಸಲು: ಮೊಸಳೆ ಕಣ್ಣೀರು’</strong></p><p>‘ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ. ಮೀಸಲಾತಿ ಪ್ರಕ್ರಿಯೆ ಪಕ್ಷಕ್ಕೆ ಧಕ್ಕೆಯುಂಟು ಮಾಡುತ್ತದೆ ಎಂಬುದು ಅರ್ಥವಾದ ಬಳಿಕ ಸಭೆಯನ್ನು ಏಕಾಏಕಿ ಮುಂದೂಡಿದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.</p><p>‘ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಕ್ರಿಯೆ ಹಳೆಯದು. ಇದನ್ನು ನೆಪವಾಗಿಟ್ಟುಕೊಂಡು ರಾಜಕೀಯ ಮಾಡಲು ರಾಜ್ಯ ಸರ್ಕಾರ ಹವಣಿಸುತ್ತಿದೆ. ಇದಕ್ಕೆ ಜನರು ಛೀಮಾರಿ ಹಾಕಲಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><blockquote>ನನ್ನ ವಿರುದ್ಧ ರಾಜ್ಯದ ವಿವಿಧೆಡೆ 71 ಪ್ರಕರಣಗಳನ್ನು ದಾಖಲಿಸಲಾಗಿದೆ. ಸುಳ್ಳು ದೂರು ನೀಡಿದವರ ವಿರುದ್ಧ ಪ್ರತಿದೂರು ದಾಖಲಿಸುವೆ. ಪೊಲೀಸರ ನಡೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವೆ </blockquote><span class="attribution">ಬಸನಗೌಡ ಪಾಟೀಲ ಯತ್ನಾಳ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು (ದಾವಣಗೆರೆ):</strong> ಹಿಂದೂ ಸಮಾಜ ಒಟ್ಟಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡುವುದು ಸುಲಭ. ಹಿಂದೂಗಳ ಮತಗಳನ್ನು ವಿಭಜಿಸುವ ಕೆಟ್ಟ ಕೆಲಸವನ್ನು ಎಂದಿಗೂ ಮಾಡುವುದಿಲ್ಲ. ಬೇರೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಪಷ್ಟಪಡಿಸಿದರು.</p><p>‘ಹಿಂದೂ ಸಮಾಜ ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿಂದೂತ್ವದ ಆಧಾರದಲ್ಲಿ ನಡೆಯುವುದು ಸ್ಪಷ್ಟವಾಗಿದೆ. ಕಾರ್ಯತಂತ್ರದ ಕುರಿತು ಕೆ.ಎಸ್. ಈಶ್ವರಪ್ಪ ಜತೆಗೆ ಚರ್ಚೆ ನಡೆದಿದೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ಗಣಪತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಹಾಗೂ ಉಗುಳುವ ಕೃತ್ಯಗಳು ಅಲ್ಲಲ್ಲಿ ನಡೆದಿವೆ. ಇದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಅವರ ಜೆಸಿಬಿ ಮಾದರಿ ಆಡಳಿತ ರಾಜ್ಯದಲ್ಲಿ ಬರಬೇಕಿದೆ. ಈ ಬಗ್ಗೆ ಹಿಂದೂತ್ವದ ಕಾರ್ಯಕರ್ತರು ಅಪೇಕ್ಷೆ ವ್ಯಕ್ತಪಡಿಸುತ್ತಿದ್ದಾರೆ’ ಎಂದರು.</p><p>‘ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಿಂದೂ ಸಮಾಜದ ವಿರುದ್ಧ ನೀಡಿದ ಹೇಳಿಕೆಯನ್ನು ಗಮನಿಸಿದ್ದೇನೆ. ಇನ್ನು ಮುಂದಿನ ಚುನಾವಣೆಯಲ್ಲಿ ಮುಸ್ಲಿಂ ಮತಗಳು ಮಾತ್ರವೇ ಶಾಮನೂರು ಕುಟುಂಬಕ್ಕೆ ಬರಲಿವೆ. ಹಿಂದೂಗಳ ಮತಗಳು ಹಿಂದುತ್ವದ ಪ್ರತಿಪಾದಕರಿಗೆ ಸಿಗಲಿವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p><p><strong>‘ಎಸ್ಟಿ ಮೀಸಲು: ಮೊಸಳೆ ಕಣ್ಣೀರು’</strong></p><p>‘ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ. ಮೀಸಲಾತಿ ಪ್ರಕ್ರಿಯೆ ಪಕ್ಷಕ್ಕೆ ಧಕ್ಕೆಯುಂಟು ಮಾಡುತ್ತದೆ ಎಂಬುದು ಅರ್ಥವಾದ ಬಳಿಕ ಸಭೆಯನ್ನು ಏಕಾಏಕಿ ಮುಂದೂಡಿದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.</p><p>‘ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಕ್ರಿಯೆ ಹಳೆಯದು. ಇದನ್ನು ನೆಪವಾಗಿಟ್ಟುಕೊಂಡು ರಾಜಕೀಯ ಮಾಡಲು ರಾಜ್ಯ ಸರ್ಕಾರ ಹವಣಿಸುತ್ತಿದೆ. ಇದಕ್ಕೆ ಜನರು ಛೀಮಾರಿ ಹಾಕಲಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><blockquote>ನನ್ನ ವಿರುದ್ಧ ರಾಜ್ಯದ ವಿವಿಧೆಡೆ 71 ಪ್ರಕರಣಗಳನ್ನು ದಾಖಲಿಸಲಾಗಿದೆ. ಸುಳ್ಳು ದೂರು ನೀಡಿದವರ ವಿರುದ್ಧ ಪ್ರತಿದೂರು ದಾಖಲಿಸುವೆ. ಪೊಲೀಸರ ನಡೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವೆ </blockquote><span class="attribution">ಬಸನಗೌಡ ಪಾಟೀಲ ಯತ್ನಾಳ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>